<p><strong>ರಾಮನಗರ:</strong> ರೇಷ್ಮೆಗೂಡಿಗೆ ರಾಜ್ಯ ಸರ್ಕಾರ ಕೂಡಲೇ ಪ್ರೋತ್ಸಾಹ ಧನವನ್ನು ಘೋಷಿಸಬೇಕು ಎಂದು ಜಿಲ್ಲಾ ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರವಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಕೊರೊನಾ ಲಾಕ್ಡೌನ್ ಪರಿಣಾಮವಾಗಿ ರೇಷ್ಮೆಗೂಡಿನ ದರ ಕುಸಿತ ಕಂಡಿದೆ. ಹೀಗಾಗಿ ದ್ವಿತಳಿ ಗೂಡಿಗೆ ₹250 ಹಾಗೂ ಮಿಶ್ರತಳಿ ಗೂಡಿಗೆ ₹200 ಪ್ರೋತ್ಸಾಹಧನ ನೀಡಬೇಕು. ರೇಷ್ಮೆಬೆಳೆ ಮಾಡಲಾಗದೇ ಇರುವ ಹಿಪ್ಪುನೇರಳೆ ತೋಟಕ್ಕೆ ಪ್ರತಿ ಎಕರೆಗೆ ₹25ಸಾವಿರ ಪರಿಹಾರಧನ ನೀಡಬೇಕು. ಸರ್ಕಾರ ರೀಲರ್ಗಳ ಸಮಸ್ಯೆಗೆ ಸ್ಪಂದಿಸಿ ಕೆಎಸ್ಎಂಬಿ ಮೂಲಕ ಒತ್ತೆ ಸಾಲ ನೀಡುತ್ತಿದೆ. ಅದೇ ರೀತಿ ರೇಷ್ಮೆ ಬೆಳೆಗಾರರ ಸಮಸ್ಯೆಗೂ ಪರಿಹಾರ ನೀಡಬೇಕೆಂದು ಎಂದು ಹೇಳಿದರು.</p>.<p>ಸರ್ಕಾರವೇ ರೇಷ್ಮೆ ಕೃಷಿ ಕ್ಷೇತ್ರಗಳಲ್ಲಿ ಚಾಕಿಹುಳು ಸಾಕಾಣಿಕಾ ಕೇಂದ್ರಗಳನ್ನು ತೆರೆದು ಬೆಳೆಗಾರರಿಗೆ ಕಡಿಮೆ ದರದಲ್ಲಿ ಉತ್ತಮ ಚಾಕಿಹುಳು ಸರಬರಾಜು ಮಾಡಬೇಕು. ಸೋಂಕು ನಿವಾರಕ ಔಷಧ ನೀಡಬೇಕು. ರೇಷ್ಮೆಹುಳು ಮನೆ ಮತ್ತು ಹಾಸಿಗೆ ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಭೈರಮಂಗಲ ವ್ಯಾಪ್ತಿಯಲ್ಲಿ ರೇಷ್ಮೆ ಹುಳು ಸಾಕಾಣಿಕೆ ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಅವರಿಗೂ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾ ಅಧ್ಯಕ್ಷ ಗೌತಮ್ ಗೌಡ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಲ್ಲರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ, ರೇಷ್ಮೆ ಬೆಳೆಗಾರರನ್ನು ಮಾತ್ರ ಕಡೆಗಣಿಸಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಸಂಕಷ್ಟದಲ್ಲಿರುವ ರೇಷ್ಮೆ ಬೆಳೆಗಾರರ ನೆರವಿಗೆ ಧಾವಿಸುವಂತೆ ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಚಂದ್ರು, ಶಶಿ, ಅನಂತ್, ರಾಮಕೃಷ್ಣ, ಶಿವ ರೇಣುಕ, ಸಂತೋಷ್ ಬಾಲು, ರಾಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ರೇಷ್ಮೆಗೂಡಿಗೆ ರಾಜ್ಯ ಸರ್ಕಾರ ಕೂಡಲೇ ಪ್ರೋತ್ಸಾಹ ಧನವನ್ನು ಘೋಷಿಸಬೇಕು ಎಂದು ಜಿಲ್ಲಾ ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರವಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಕೊರೊನಾ ಲಾಕ್ಡೌನ್ ಪರಿಣಾಮವಾಗಿ ರೇಷ್ಮೆಗೂಡಿನ ದರ ಕುಸಿತ ಕಂಡಿದೆ. ಹೀಗಾಗಿ ದ್ವಿತಳಿ ಗೂಡಿಗೆ ₹250 ಹಾಗೂ ಮಿಶ್ರತಳಿ ಗೂಡಿಗೆ ₹200 ಪ್ರೋತ್ಸಾಹಧನ ನೀಡಬೇಕು. ರೇಷ್ಮೆಬೆಳೆ ಮಾಡಲಾಗದೇ ಇರುವ ಹಿಪ್ಪುನೇರಳೆ ತೋಟಕ್ಕೆ ಪ್ರತಿ ಎಕರೆಗೆ ₹25ಸಾವಿರ ಪರಿಹಾರಧನ ನೀಡಬೇಕು. ಸರ್ಕಾರ ರೀಲರ್ಗಳ ಸಮಸ್ಯೆಗೆ ಸ್ಪಂದಿಸಿ ಕೆಎಸ್ಎಂಬಿ ಮೂಲಕ ಒತ್ತೆ ಸಾಲ ನೀಡುತ್ತಿದೆ. ಅದೇ ರೀತಿ ರೇಷ್ಮೆ ಬೆಳೆಗಾರರ ಸಮಸ್ಯೆಗೂ ಪರಿಹಾರ ನೀಡಬೇಕೆಂದು ಎಂದು ಹೇಳಿದರು.</p>.<p>ಸರ್ಕಾರವೇ ರೇಷ್ಮೆ ಕೃಷಿ ಕ್ಷೇತ್ರಗಳಲ್ಲಿ ಚಾಕಿಹುಳು ಸಾಕಾಣಿಕಾ ಕೇಂದ್ರಗಳನ್ನು ತೆರೆದು ಬೆಳೆಗಾರರಿಗೆ ಕಡಿಮೆ ದರದಲ್ಲಿ ಉತ್ತಮ ಚಾಕಿಹುಳು ಸರಬರಾಜು ಮಾಡಬೇಕು. ಸೋಂಕು ನಿವಾರಕ ಔಷಧ ನೀಡಬೇಕು. ರೇಷ್ಮೆಹುಳು ಮನೆ ಮತ್ತು ಹಾಸಿಗೆ ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಭೈರಮಂಗಲ ವ್ಯಾಪ್ತಿಯಲ್ಲಿ ರೇಷ್ಮೆ ಹುಳು ಸಾಕಾಣಿಕೆ ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಅವರಿಗೂ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾ ಅಧ್ಯಕ್ಷ ಗೌತಮ್ ಗೌಡ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಲ್ಲರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ, ರೇಷ್ಮೆ ಬೆಳೆಗಾರರನ್ನು ಮಾತ್ರ ಕಡೆಗಣಿಸಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಸಂಕಷ್ಟದಲ್ಲಿರುವ ರೇಷ್ಮೆ ಬೆಳೆಗಾರರ ನೆರವಿಗೆ ಧಾವಿಸುವಂತೆ ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಚಂದ್ರು, ಶಶಿ, ಅನಂತ್, ರಾಮಕೃಷ್ಣ, ಶಿವ ರೇಣುಕ, ಸಂತೋಷ್ ಬಾಲು, ರಾಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>