ಬೋವಿ ಸಂಘರ್ಷ ಸಮಿತಿಯ ರಾಮನಗರ ಜಿಲ್ಲಾ ಅಧ್ಯಕ್ಷ ರಾಮಸಾಗರ ಕೃಷ್ಣ, ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ ಸಂಸ್ಥಾಪಕ ಅಧ್ಯಕ್ಷ ಆಂಜನಪ್ಪ ಮಾತನಾಡಿ, ಗೂಳಿಹಟ್ಟಿ ಶೇಖರ್ ಅವರು ಸಚಿವರಾಗಿದ್ದಾಗ ಎಲ್ಲಾ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳು, ಬಡವರು, ದೀನ ದಲಿತರ ಪರವಾಗಿ ಕೆಲಸ ಮಾಡಿದ್ದಾರೆ. ದುರ್ಬಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಜನಾನುರಾಗಿ ಆಗಿರುವ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಿದರು. ರುದ್ರೇಶ್, ಟಿ.ವಿ. ರವಿ ಇದ್ದರು.