ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುರಸ್ತಿಗೆ ಒತ್ತಾಯ

Last Updated 7 ನವೆಂಬರ್ 2021, 5:19 IST
ಅಕ್ಷರ ಗಾತ್ರ

ಬಿಡದಿ: ಬಾನಂದೂರು–ಬಿಡದಿ ಮಧ್ಯೆ ಹಾದುಹೋಗುವ ಬಸವರಾಜಪ್ಪ ಅವರ ಜಮೀನಿನ ಬಳಿ ಇರುವ ತೊರೆನೆಲ್ಲಿಗುಡ್ಡೆ ಕೆರೆಯ ಕೋಡಿ ಹರಿದಿರುವುದರಿಂದ ರಸ್ತೆ ಕುಸಿದಿದೆ. ಇದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಜೊತೆಗೆ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜನ್ಮ ಸ್ಥಳವಾಗಿರುವುದರಿಂದ ಜನರು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ರಸ್ತೆಯಲ್ಲಿ ಗುಂಡಿ ಬಿದ್ದಿರುವುದರಿಂದ ಅಪಘಾತಗಳ ಸಂಖ್ಯೆ
ಹೆಚ್ಚುತ್ತಿದೆ.

‘ಕೂಡಲೇ ಸ್ಥಳೀಯ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ದುರಸ್ತಿಗೆ ಕ್ರಮವಹಿಸಬೇಕು’ ಎಂದು ಬಾನಂದೂರು ಗ್ರಾಮಸ್ಥ ಬಿ.ಎಂ. ಸತೀಶ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT