<p><strong>ರಾಮನಗರ</strong>: ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ವಿವಿಧ ಇಲಾಖೆಯ ಮುಖ್ಯಸ್ಥರ ಜೊತೆ ರೈತರ ಸಭೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಾಮನಗರ ತಹಶೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಜಿಲ್ಲೆಯಲ್ಲಿ ರಾಗಿ ಖರೀದಿ ಮಾಡಿ ಮೂರ್ನಾಲ್ಕು ತಿಂಗಳಾದರೂ ಇನ್ನೂ ರೈತರಿಗೆ ಹಣ ಪಾವತಿಸಿಲ್ಲ. ಕೂಡಲೇ ಬಾಕಿ ಹಣ ಪಾವತಿ ಮಾಡಬೇಕು. ರೈತರನ್ನು ಮುಂಚೂಣಿ ವಾರಿಯರ್ಗಳು ಎಂದು ಪರಿಗಣಿಸಿ, ಕೋವಿಡ್ನಿಂದ ಸಾವನ್ನಪ್ಪಿದ ರೈತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರೈತರಿಗೆ ಉಚಿತ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಜೊತೆಗೆ ಕೃಷಿ ಯಂತ್ರಧಾರೆ ಮುಖಾಂತರ ಕೃಷಿ ಪರಿಕರವನ್ನು ಉಚಿತವಾಗಿ ಪೂರೈಕೆ ಮಾಡಬೇಕು. ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸುವ ಆಮಿಷವೊಡ್ಡಿ ಪ್ರತಿ ರೈತನಿಂದ ₹ 20 ಸಾವಿರಕ್ಕೂ ಹೆಚ್ಚು ವಸೂಲಿ ಮಾಡಲಾಗಿದೆ. ಆದಾಗ್ಯೂ ಹಳೆಯ ಪರಿವರ್ತಕಗಳನ್ನು ತೆರವುಗೊಳಿಸಿ ಹೊಸದನ್ನು ಅಳವಡಿಸದೇ ರೈತರಿಗೆ ಮೋಸ ಮಾಢಿರುವ ಬೆಸ್ಕಾಂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ರೈತ ಸಂಘದ ರಾಜ್ಯ ಉಪಾಧ್ಯಕ್ಷೆ ಅನುಸೂಯಮ್ಮ, ಜಿಲ್ಲಾ ಅಧ್ಯಕ್ಷ ಭೈರೇಗೌಡ, ಕಾರ್ಯಾಧ್ಯಕ್ಷ ಉಮೇಶ್, ಪ್ರಮುಖರಾದ ಗೋವಿಂದರಾಜು, ಕೃಷ್ಣಪ್ಪ, ಶಿವಕುಮಾರಸ್ವಾಮಿ, ಲೋಕೇಶ್, ಸಯ್ಯದ್ ಉಲ್ಲಾ ಖಾನ್, ನಾಗಮ್ಮ, ರಾಮಚಂದ್ರಯ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ವಿವಿಧ ಇಲಾಖೆಯ ಮುಖ್ಯಸ್ಥರ ಜೊತೆ ರೈತರ ಸಭೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಾಮನಗರ ತಹಶೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಜಿಲ್ಲೆಯಲ್ಲಿ ರಾಗಿ ಖರೀದಿ ಮಾಡಿ ಮೂರ್ನಾಲ್ಕು ತಿಂಗಳಾದರೂ ಇನ್ನೂ ರೈತರಿಗೆ ಹಣ ಪಾವತಿಸಿಲ್ಲ. ಕೂಡಲೇ ಬಾಕಿ ಹಣ ಪಾವತಿ ಮಾಡಬೇಕು. ರೈತರನ್ನು ಮುಂಚೂಣಿ ವಾರಿಯರ್ಗಳು ಎಂದು ಪರಿಗಣಿಸಿ, ಕೋವಿಡ್ನಿಂದ ಸಾವನ್ನಪ್ಪಿದ ರೈತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರೈತರಿಗೆ ಉಚಿತ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಜೊತೆಗೆ ಕೃಷಿ ಯಂತ್ರಧಾರೆ ಮುಖಾಂತರ ಕೃಷಿ ಪರಿಕರವನ್ನು ಉಚಿತವಾಗಿ ಪೂರೈಕೆ ಮಾಡಬೇಕು. ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸುವ ಆಮಿಷವೊಡ್ಡಿ ಪ್ರತಿ ರೈತನಿಂದ ₹ 20 ಸಾವಿರಕ್ಕೂ ಹೆಚ್ಚು ವಸೂಲಿ ಮಾಡಲಾಗಿದೆ. ಆದಾಗ್ಯೂ ಹಳೆಯ ಪರಿವರ್ತಕಗಳನ್ನು ತೆರವುಗೊಳಿಸಿ ಹೊಸದನ್ನು ಅಳವಡಿಸದೇ ರೈತರಿಗೆ ಮೋಸ ಮಾಢಿರುವ ಬೆಸ್ಕಾಂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ರೈತ ಸಂಘದ ರಾಜ್ಯ ಉಪಾಧ್ಯಕ್ಷೆ ಅನುಸೂಯಮ್ಮ, ಜಿಲ್ಲಾ ಅಧ್ಯಕ್ಷ ಭೈರೇಗೌಡ, ಕಾರ್ಯಾಧ್ಯಕ್ಷ ಉಮೇಶ್, ಪ್ರಮುಖರಾದ ಗೋವಿಂದರಾಜು, ಕೃಷ್ಣಪ್ಪ, ಶಿವಕುಮಾರಸ್ವಾಮಿ, ಲೋಕೇಶ್, ಸಯ್ಯದ್ ಉಲ್ಲಾ ಖಾನ್, ನಾಗಮ್ಮ, ರಾಮಚಂದ್ರಯ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>