ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಕುಮಾರ್ ಮಾತನಾಡಿ, ಪ್ರಸಿದ್ಧ ಕೋತಿ ಆಂಜನೇಯಸ್ವಾಮಿ ದೇವಾಲಯ, ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ, ಹನುಮಂತನಗರ ವಸತಿ ಪ್ರದೇಶ, ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಲಿದೆ. ದೇವಾಲಯಕ್ಕೆ ಬರುವ ಭಕ್ತರು ಹಾಗೂ ಕೆಲಸದ ನಿಮಿತ್ತ ಪಂಚಾಯಿತಿ ಕಚೇರಿಗೆ ಬರುವ ಸಾರ್ವಜನಿಕರು ಹೆದ್ದಾರಿ ದಾಟಲು ಸಾಧ್ಯವಿರುವುದಿಲ್ಲ. ಸರ್ವೀಸ್ ರಸ್ತೆಯಲ್ಲಿ ಒಂದೂವರೆ ಕಿಲೋಮೀಟರ್ ದೂರ ಬರಬೇಕಾಗಿದೆ. ಆದ್ದರಿಂದ ಹನುಮಂತನಗರದ ಬಳಿ ಪಾದಚಾರಿ ಮೇಲ್ಸೇತುವೆಯ ಅಗತ್ಯವಿದೆ ಎಂದು ತಿಳಿಸಿದರು.