‘ಮಂಚನಬೆಲೆ ಜಲಾಶಯದಿಂದ 60 ಅಡಿ ಮೇಲಕ್ಕೆ ನೀರನ್ನು ಲಿಫ್ಟ್ ಮಾಡಿ, ದೊಡ್ಡ ಮೊತ್ತದ ಹಣ ಖರ್ಚು ಮಾಡಿ ಪಟ್ಟಣಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಅಂದಿನ ಸಚಿವ ಎಚ್.ಎಂ ರೇವಣ್ಣ ಅವರ ದೂರದೃಷ್ಟಿಯ ಫಲವಾಗಿ ಪಟ್ಟಣದ ಜನತೆ ಶುದ್ಧ ನೀರು ಕುಡಿಯುವಂತಾಗಿದೆ. ಆದರೆ ಪುರಸಭೆ ಅಧಿಕಾರಿಗಳ ಪೈಕಿ ಯಾರೊಬ್ಬರೂ ಇಲ್ಲಿ ವಾಸವಾಗಿಲ್ಲ. ಬೆಳಿಗ್ಗೆ ಬಂದು, ಸಂಜೆ ಹೊರಟುಬಿಡುತ್ತಾರೆ. ನೀರು ವ್ಯರ್ಥವಾಗಿ ಚರಂಡಿ ಪಾಲಾದರೂ ಅಧಿಕಾರಿಗಳು ಗಮನಿಸಿಲ್ಲ. ಅವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ’ ಎಂದು ದೂರಿದರು.