<p>ರಾಮನಗರ: ಇನ್ಸ್ಪೆಕ್ಟರ್ ನಂದೀಶ್ ಸಾವು ಸ್ವಾಭಾವಿಕ ಆಗಿದ್ದು, ಅದಕ್ಕೆ ಬೇರೆ ಬಣ್ಣ ಕಲ್ಪಿಸುವುದು ಬೇಡ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು</p>.<p>ನಂದೀಶ್ ₹70–80 ಲಕ್ಷ ಕೊಟ್ಟು ಈ ಹುದ್ದೆಗೆ ಬಂದಿದ್ದರು ಎಂಬ ಸಚಿವ ಎಂಟಿಬಿ ನಾಗರಾಜು ಹೇಳಿಕೆ ಕುರಿತು ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.</p>.<p>‘ನಂದೀಶ್ ಕುರಿತು ಎಂಟಿಬಿ ನಾಗರಾಜು ಮುಕ್ತವಾಗಿ ಮಾತನಾಡಿದ್ದಾರೆ. ಹಿಂದೆ ಕಾಂಗ್ರೆಸ್ನಲ್ಲಿ ಆ ರೀತಿ ವ್ಯವಸ್ಥೆ ಇತ್ತು. ಆದರೆ ಈಗಿನ ಸರ್ಕಾರದಲ್ಲಿ ಇಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಉನ್ನತ ತನಿಖೆಗೆ ಆದೇಶಿಸಿದ್ದು, ನ್ಯಾಯಸಮ್ಮತ ತನಿಖೆ ನಡೆಯಲಿದೆ’ ಎಂದರು.</p>.<p>‘ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಸಮ್ಮತ ತನಿಖೆ ನಡೆಯಲಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು<br />ಪ್ರತಿಕ್ರಿಯಿಸಿದರು.</p>.<p>ಈ ಬಾರಿ ಸಚಿವ ಸಂಪುಟ ರಚನೆ ಹಾಗೂ ಸಿ.ಪಿ. ಯೋಗೇಶ್ವರ್ಗೆ ಅವಕಾಶ ಕುರಿತು ಮಾತನಾಡಿ ‘ಯೋಗೇಶ್ವರ್ಗೆ ಒಳ್ಳೆಯದಾಗಬೇಕು. ಹೀಗಾಗಿ ಅವಕಾಶ ಸಿಗಬಹುದು’<br />ಎಂದರು.</p>.<p>‘ಹೊಸ ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ನವೆಂಬರ್ 30ರ ಒಳಗೆ ಮುಗಿಸಲು ಸೂಚಿಸಿದ್ದು, ನಂತರ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲಾಗುವುದು. ರಾಜೀವ್ ಗಾಂಧಿ ವಿ.ವಿ ಕ್ಯಾಂಪಸ್ ನಿರ್ಮಾಣ ಸಂಬಂಧ ಆಡಳಿತಾತ್ಮಕ ಅನುಮೋದನೆ ದೊರೆಯಬೇಕು. ಇದಕ್ಕಾಗಿ ಕಾಯುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಇನ್ಸ್ಪೆಕ್ಟರ್ ನಂದೀಶ್ ಸಾವು ಸ್ವಾಭಾವಿಕ ಆಗಿದ್ದು, ಅದಕ್ಕೆ ಬೇರೆ ಬಣ್ಣ ಕಲ್ಪಿಸುವುದು ಬೇಡ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು</p>.<p>ನಂದೀಶ್ ₹70–80 ಲಕ್ಷ ಕೊಟ್ಟು ಈ ಹುದ್ದೆಗೆ ಬಂದಿದ್ದರು ಎಂಬ ಸಚಿವ ಎಂಟಿಬಿ ನಾಗರಾಜು ಹೇಳಿಕೆ ಕುರಿತು ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.</p>.<p>‘ನಂದೀಶ್ ಕುರಿತು ಎಂಟಿಬಿ ನಾಗರಾಜು ಮುಕ್ತವಾಗಿ ಮಾತನಾಡಿದ್ದಾರೆ. ಹಿಂದೆ ಕಾಂಗ್ರೆಸ್ನಲ್ಲಿ ಆ ರೀತಿ ವ್ಯವಸ್ಥೆ ಇತ್ತು. ಆದರೆ ಈಗಿನ ಸರ್ಕಾರದಲ್ಲಿ ಇಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಉನ್ನತ ತನಿಖೆಗೆ ಆದೇಶಿಸಿದ್ದು, ನ್ಯಾಯಸಮ್ಮತ ತನಿಖೆ ನಡೆಯಲಿದೆ’ ಎಂದರು.</p>.<p>‘ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಸಮ್ಮತ ತನಿಖೆ ನಡೆಯಲಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು<br />ಪ್ರತಿಕ್ರಿಯಿಸಿದರು.</p>.<p>ಈ ಬಾರಿ ಸಚಿವ ಸಂಪುಟ ರಚನೆ ಹಾಗೂ ಸಿ.ಪಿ. ಯೋಗೇಶ್ವರ್ಗೆ ಅವಕಾಶ ಕುರಿತು ಮಾತನಾಡಿ ‘ಯೋಗೇಶ್ವರ್ಗೆ ಒಳ್ಳೆಯದಾಗಬೇಕು. ಹೀಗಾಗಿ ಅವಕಾಶ ಸಿಗಬಹುದು’<br />ಎಂದರು.</p>.<p>‘ಹೊಸ ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ನವೆಂಬರ್ 30ರ ಒಳಗೆ ಮುಗಿಸಲು ಸೂಚಿಸಿದ್ದು, ನಂತರ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲಾಗುವುದು. ರಾಜೀವ್ ಗಾಂಧಿ ವಿ.ವಿ ಕ್ಯಾಂಪಸ್ ನಿರ್ಮಾಣ ಸಂಬಂಧ ಆಡಳಿತಾತ್ಮಕ ಅನುಮೋದನೆ ದೊರೆಯಬೇಕು. ಇದಕ್ಕಾಗಿ ಕಾಯುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>