ಮಾಗಡಿ: ಪುರಸಭೆ ಚುನಾವಣೆ ಅಂಗವಾಗಿ ನ.10ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಶನಿವಾರ ಮಧ್ಯಾಹ್ನದ ನಂತರ ಸೋಮೇಶ್ವರ ಬಡಾವಣೆ, ರಾಜೀವಗಾಂಧಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಧರ ಪರವಾಗಿ ಬಿಜೆಪಿ ಮುಖಂಡ ಎ.ಎಚ್.ಬಸವರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ರಂಗಧಾಮಯ್ಯ ಹಾಗೂ ಕಾರ್ಯಕರ್ತರು ಬಿರುಸಿನ ಪ್ರಚಾರ ನಡೆಸಿದರು.