<p><strong>ರಾಮನಗರ:</strong> ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಿರುವ ಮಾನವ ಸರಪಳಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಡಿ.ಸಿ ಯಶವಂತ್ ವಿ. ಗುರುಕರ್ ಭಾನುವಾರ ಚಾಲನೆ ನೀಡಿದರು. ಎಲ್ಲರೂ ಪರಸ್ಪರ ಕೈ ಹಿಡಿದು ಮೇಲಕ್ಕೆತ್ತಿ ಪ್ರಜಾಪ್ರಭುತ್ವ ದಿನವನ್ನು ಸಂಭ್ರಮಿಸಿದರು. </p> <p>ನಂತರ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್ ಓದಿದ ಸಂವಿಧಾನ ಪೀಠಿಕೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು. ಇದೇ ವೇಳೆ ನಾಡಗೀತೆ ಮೊಳಗಿತು.</p> <p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಉಪ ವಿಭಾಗಾಧಿಕಾರಿ ಬಿನೋಯ್, ದಲಿತ ಸಂಘಟನೆಗಳ ಮುಖಂಡರು, ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಮತ್ತು ಸಂಘಟನೆಗಳ ಸದಸ್ಯರು ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದರು.</p> <p>ಮಾನವ ಸರಪಳಿಗೆ ಚಾಲನೆ ನೀಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಗೈರಾಗಿದ್ದರಿಂದ ಜಿಲ್ಲಾಧಿಕಾರಿಯೇ ಚಾಲನೆ ನೀಡಿದ್ದರು. ಕ್ಷೇತ್ರದ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅನುಪಸ್ಥಿತಿ ಸಹ ಎದ್ದು ಕಾಣುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಿರುವ ಮಾನವ ಸರಪಳಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಡಿ.ಸಿ ಯಶವಂತ್ ವಿ. ಗುರುಕರ್ ಭಾನುವಾರ ಚಾಲನೆ ನೀಡಿದರು. ಎಲ್ಲರೂ ಪರಸ್ಪರ ಕೈ ಹಿಡಿದು ಮೇಲಕ್ಕೆತ್ತಿ ಪ್ರಜಾಪ್ರಭುತ್ವ ದಿನವನ್ನು ಸಂಭ್ರಮಿಸಿದರು. </p> <p>ನಂತರ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್ ಓದಿದ ಸಂವಿಧಾನ ಪೀಠಿಕೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು. ಇದೇ ವೇಳೆ ನಾಡಗೀತೆ ಮೊಳಗಿತು.</p> <p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಉಪ ವಿಭಾಗಾಧಿಕಾರಿ ಬಿನೋಯ್, ದಲಿತ ಸಂಘಟನೆಗಳ ಮುಖಂಡರು, ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಮತ್ತು ಸಂಘಟನೆಗಳ ಸದಸ್ಯರು ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದರು.</p> <p>ಮಾನವ ಸರಪಳಿಗೆ ಚಾಲನೆ ನೀಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಗೈರಾಗಿದ್ದರಿಂದ ಜಿಲ್ಲಾಧಿಕಾರಿಯೇ ಚಾಲನೆ ನೀಡಿದ್ದರು. ಕ್ಷೇತ್ರದ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅನುಪಸ್ಥಿತಿ ಸಹ ಎದ್ದು ಕಾಣುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>