<p><strong>ರಾಮನಗರ:</strong> ‘ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಲ್ಲ. ವರ್ಷದ 365 ದಿನಗಳು ಮಹಿಳೆಯರ ದಿನವೇ ಆಗಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರೆ ಸಮಾಜ ಬದಲಾವಣೆಗೆ ತೆರೆದುಕೊಳ್ಳುತ್ತದೆ’ ಎಂದುಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪಂಚಾಕ್ಷರಿ ಎಂ. ಅಭಿಪ್ರಾಯಪಟ್ಟರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ‘ಬೇಟಿ ಬಜಾವೋ - ಬೇಟಿ ಪಡಾವೋ ಅಭಿಯಾನ’ದಡಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಪುರುಷನಿಗೆ ಸರಿ ಸಮಾನವಾದ ಹಕ್ಕುಗಳನ್ನು ಭಾರತದ ಸಂವಿಧಾನ ಹೆಣ್ಣು ಮಕ್ಕಳಿಗೂ ನೀಡಿದೆ. ಅದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಹೆಣ್ಣಿನ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಬೇಕು. ತೊಂದರೆಗೆ ಒಳಗಾದವರನ್ನು ಸಮಸ್ಯೆಯಿಂದ ಪಾರುಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ಹೆಣ್ಣಿಗೆ ನಂಬಿಕೆ, ಭರವಸೆ, ಉತ್ತಮ ಜೀವನ ನಡೆಸುವ ಮಾರ್ಗವನ್ನು ತೋರಬೇಕು. ವಿವಿಧ ರಂಗಗಳಲ್ಲಿ ಹೆಣ್ಣು ಮಕ್ಕಳು ಮಾಡುವ ಸಾಧನೆಗಳನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡುವಂತಹ ಕಾರ್ಯಕ್ರಮವನ್ನು ಆಯೋಜಿಸಬೇಕು. ಅದು ಇನ್ನುಳಿದ ಹೆಣ್ಣು ಮಕ್ಕಳಿಗೆ ಸ್ಪೂರ್ತಿ ನೀಡುತ್ತದೆ’ಎಂದು ತಿಳಿಸಿದರು.</p>.<p>‘ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ಮಹಿಳೆ ಸಾಧನೆ ಮಾಡಲು ನಿಂತರೆ, ಅದಕ್ಕೆ ಕೊನೆ ಎಂಬುದೇ ಇರುವುದಿಲ್ಲ. ಮಹಿಳೆಯರ ಸಾಧನೆಯನ್ನು ಜಗತ್ತಿಗೆ ತೋರಿಸಿ ಸ್ಪೂರ್ತಿ ತುಂಬಲು ಮಹಿಳಾ ದಿನಾಚರಣೆ ಕಾರ್ಯಕ್ರಮ ಪೂರಕವಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಿ. ಧನರಾಜು ಮಾತನಾಡಿದರು. ಉತ್ತಮವಾಗಿ ಕಾರ್ಯನಿರ್ವಹಿಸಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹಾಗೂ ಕಲಾವಿದೆ ಚಿತ್ರರಾವ್ ಅವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿಯರಿಗೆ ಪ್ರಶಸ್ತಿ ನೀಡಲಾಯಿತು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ದಿನೇಶ ಜೆ.ಆರ್., ಜಿಲ್ಲಾ ನಿರೂಪಣಾಧಿಕಾರಿ ಡಾ. ಲಕ್ಷ್ಮಿದೇವಿ ವೇದಿಕೆಯಲ್ಲಿದ್ದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮೇಲ್ವಿಚಾರಕರು ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಲ್ಲ. ವರ್ಷದ 365 ದಿನಗಳು ಮಹಿಳೆಯರ ದಿನವೇ ಆಗಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರೆ ಸಮಾಜ ಬದಲಾವಣೆಗೆ ತೆರೆದುಕೊಳ್ಳುತ್ತದೆ’ ಎಂದುಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪಂಚಾಕ್ಷರಿ ಎಂ. ಅಭಿಪ್ರಾಯಪಟ್ಟರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ‘ಬೇಟಿ ಬಜಾವೋ - ಬೇಟಿ ಪಡಾವೋ ಅಭಿಯಾನ’ದಡಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಪುರುಷನಿಗೆ ಸರಿ ಸಮಾನವಾದ ಹಕ್ಕುಗಳನ್ನು ಭಾರತದ ಸಂವಿಧಾನ ಹೆಣ್ಣು ಮಕ್ಕಳಿಗೂ ನೀಡಿದೆ. ಅದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಹೆಣ್ಣಿನ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಬೇಕು. ತೊಂದರೆಗೆ ಒಳಗಾದವರನ್ನು ಸಮಸ್ಯೆಯಿಂದ ಪಾರುಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ಹೆಣ್ಣಿಗೆ ನಂಬಿಕೆ, ಭರವಸೆ, ಉತ್ತಮ ಜೀವನ ನಡೆಸುವ ಮಾರ್ಗವನ್ನು ತೋರಬೇಕು. ವಿವಿಧ ರಂಗಗಳಲ್ಲಿ ಹೆಣ್ಣು ಮಕ್ಕಳು ಮಾಡುವ ಸಾಧನೆಗಳನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡುವಂತಹ ಕಾರ್ಯಕ್ರಮವನ್ನು ಆಯೋಜಿಸಬೇಕು. ಅದು ಇನ್ನುಳಿದ ಹೆಣ್ಣು ಮಕ್ಕಳಿಗೆ ಸ್ಪೂರ್ತಿ ನೀಡುತ್ತದೆ’ಎಂದು ತಿಳಿಸಿದರು.</p>.<p>‘ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ಮಹಿಳೆ ಸಾಧನೆ ಮಾಡಲು ನಿಂತರೆ, ಅದಕ್ಕೆ ಕೊನೆ ಎಂಬುದೇ ಇರುವುದಿಲ್ಲ. ಮಹಿಳೆಯರ ಸಾಧನೆಯನ್ನು ಜಗತ್ತಿಗೆ ತೋರಿಸಿ ಸ್ಪೂರ್ತಿ ತುಂಬಲು ಮಹಿಳಾ ದಿನಾಚರಣೆ ಕಾರ್ಯಕ್ರಮ ಪೂರಕವಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಿ. ಧನರಾಜು ಮಾತನಾಡಿದರು. ಉತ್ತಮವಾಗಿ ಕಾರ್ಯನಿರ್ವಹಿಸಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹಾಗೂ ಕಲಾವಿದೆ ಚಿತ್ರರಾವ್ ಅವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿಯರಿಗೆ ಪ್ರಶಸ್ತಿ ನೀಡಲಾಯಿತು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ದಿನೇಶ ಜೆ.ಆರ್., ಜಿಲ್ಲಾ ನಿರೂಪಣಾಧಿಕಾರಿ ಡಾ. ಲಕ್ಷ್ಮಿದೇವಿ ವೇದಿಕೆಯಲ್ಲಿದ್ದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮೇಲ್ವಿಚಾರಕರು ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>