<p><strong>ಚನ್ನಪಟ್ಟಣ</strong>: ಜೆ.ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯರು ಬುಧವಾರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.</p>.<p>ಹಣಕಾಸು ಯೋಜನೆಯಲ್ಲಿ ನಕಲಿ ಕಾಮಗಾರಿ ಮತ್ತು ಕ್ರಿಯಾ ವರದಿ ತಯಾರಿಸಿ ಲಕ್ಷಾಂತರ ರೂಪಾಯಿ ಅನುದಾನ ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಗ್ರಾ.ಪಂ.ಮಾಜಿ ಅಧ್ಯಕ್ಷರಾದ ರಾಮಚಂದ್ರು, ಪೂರ್ಣಿಮಾ, ಸದಸ್ಯರಾದ ಜ್ಯೋತಿ, ಬಸವರಾಜು, ರಂಗ, ಗಂಗಾಧರಮೂರ್ತಿ, ಲಕ್ಷ್ಮಿ, ಗುರುವಯ್ಯ, ಸಿದ್ದಪ್ಪ ಇತರರು ಆಗ್ರಹಿಸಿದರು.</p>.<p>ಗ್ರಾ.ಪಂ.ಗೆ ಬಂದಿರುವ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕಾಮಗಾರಿ ನಡೆಯದಿದ್ದರೂ ನಕಲಿ ಕಾಮಗಾರಿಗಳನ್ನು ತೋರಿಸಿ ಬಿಲ್ ಮಾಡಲಾಗಿದೆ. ಸದಸ್ಯರು ಈ ಬಗ್ಗೆ ಮಾಹಿತಿ ಕೇಳಿದರೆ ಸಬೂಬು ಹೇಳುತ್ತಿದ್ದಾರೆ. ಸಾಮಾನ್ಯ ಸಭೆ ನಡೆದು ನಾಲ್ಕು ತಿಂಗಳಾದರೂ ಅಧ್ಯಕ್ಷರು ಹಾಗೂ ಪಿಡಿಒ ಲೆಕ್ಕಪತ್ರಗಳನ್ನು ನೀಡುತ್ತಿಲ್ಲ. ಇದರ ಜೊತೆಗೆ ಪಂಚಾಯಿತಿಯಲ್ಲಿ ಸಂಗ್ರಹವಾದ ಕಂದಾಯ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ತಾ.ಪಂ. ಇಒ, ಸಿಇಒ ಹಾಗೂ ಶಾಸಕರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಕಳೆದ ಒಂದು ವರ್ಷದಿಂದ ಇಲ್ಲಿನ ಅಭಿವೃದ್ಧಿ ಕೆಲಸಗಳಿಗೆ ಗ್ರಹಣ ಹಿಡಿದಿದೆ. ಜೊತೆಗೆ ಅವ್ಯವಹಾರ ನಡೆದಿದೆ. ಈ ಬಗ್ಗೆ ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರು ಗಮನಹರಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಗ್ರಾ.ಪಂ.ಅಧ್ಯಕ್ಷ ಹಾಗೂ ಪಿಡಿಒ ಬಾರದ ಕಾರಣ ಪ್ರತಿಭಟನಾಕಾರರು ಈ ಬಗ್ಗೆ ಶಾಸಕರು, ಜಿ.ಪಂ. ಸಿಇಒ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿ ಕಚೇರಿ ಬೀಗ ತೆಗೆದು ಸ್ಥಳದಿಂದ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಜೆ.ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯರು ಬುಧವಾರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.</p>.<p>ಹಣಕಾಸು ಯೋಜನೆಯಲ್ಲಿ ನಕಲಿ ಕಾಮಗಾರಿ ಮತ್ತು ಕ್ರಿಯಾ ವರದಿ ತಯಾರಿಸಿ ಲಕ್ಷಾಂತರ ರೂಪಾಯಿ ಅನುದಾನ ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಗ್ರಾ.ಪಂ.ಮಾಜಿ ಅಧ್ಯಕ್ಷರಾದ ರಾಮಚಂದ್ರು, ಪೂರ್ಣಿಮಾ, ಸದಸ್ಯರಾದ ಜ್ಯೋತಿ, ಬಸವರಾಜು, ರಂಗ, ಗಂಗಾಧರಮೂರ್ತಿ, ಲಕ್ಷ್ಮಿ, ಗುರುವಯ್ಯ, ಸಿದ್ದಪ್ಪ ಇತರರು ಆಗ್ರಹಿಸಿದರು.</p>.<p>ಗ್ರಾ.ಪಂ.ಗೆ ಬಂದಿರುವ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕಾಮಗಾರಿ ನಡೆಯದಿದ್ದರೂ ನಕಲಿ ಕಾಮಗಾರಿಗಳನ್ನು ತೋರಿಸಿ ಬಿಲ್ ಮಾಡಲಾಗಿದೆ. ಸದಸ್ಯರು ಈ ಬಗ್ಗೆ ಮಾಹಿತಿ ಕೇಳಿದರೆ ಸಬೂಬು ಹೇಳುತ್ತಿದ್ದಾರೆ. ಸಾಮಾನ್ಯ ಸಭೆ ನಡೆದು ನಾಲ್ಕು ತಿಂಗಳಾದರೂ ಅಧ್ಯಕ್ಷರು ಹಾಗೂ ಪಿಡಿಒ ಲೆಕ್ಕಪತ್ರಗಳನ್ನು ನೀಡುತ್ತಿಲ್ಲ. ಇದರ ಜೊತೆಗೆ ಪಂಚಾಯಿತಿಯಲ್ಲಿ ಸಂಗ್ರಹವಾದ ಕಂದಾಯ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ತಾ.ಪಂ. ಇಒ, ಸಿಇಒ ಹಾಗೂ ಶಾಸಕರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಕಳೆದ ಒಂದು ವರ್ಷದಿಂದ ಇಲ್ಲಿನ ಅಭಿವೃದ್ಧಿ ಕೆಲಸಗಳಿಗೆ ಗ್ರಹಣ ಹಿಡಿದಿದೆ. ಜೊತೆಗೆ ಅವ್ಯವಹಾರ ನಡೆದಿದೆ. ಈ ಬಗ್ಗೆ ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರು ಗಮನಹರಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಗ್ರಾ.ಪಂ.ಅಧ್ಯಕ್ಷ ಹಾಗೂ ಪಿಡಿಒ ಬಾರದ ಕಾರಣ ಪ್ರತಿಭಟನಾಕಾರರು ಈ ಬಗ್ಗೆ ಶಾಸಕರು, ಜಿ.ಪಂ. ಸಿಇಒ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿ ಕಚೇರಿ ಬೀಗ ತೆಗೆದು ಸ್ಥಳದಿಂದ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>