ಭಾರತ ಸರ್ಕಾರ ಜಲ ಭದ್ರತೆಗಾಗಿ ಜಲಶಕ್ತಿ ಅಭಿಯಾನವನ್ನು ಇದೇ 1ರಿಂದ ಸೆಪ್ಟೆಂಬರ್ 15ರ ವರೆಗೆ ಮೊದಲ ಹಂತದಲ್ಲಿ ಕೈಗೊಂಡಿದ್ದು, ಈ ಆಂದೋಲನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಏತ ನೀರಾವರಿ ಯೋಜನೆಗಳ ಮಾಹಿತಿ ಪಡೆದ ಅವರು ‘ಪಾರಂಪರಿಕ ಜಲಮೂಲಗಳಾದ ಕೆರೆ, ಬಾವಿ, ನದಿಗಳ ರಕ್ಷಣೆ, ಜಲರಕ್ಷಣೆ, ಜಲ ಮರುಪೂರಣ ಹಾಗೂ ಅರಣ್ಯೀಕರಣ ಮಾಡುವುದು ಜಲಶಕ್ತಿ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅಂತರ್ಜಲ ಹೆಚ್ಚಿಸಲು ಅತಿಹೆಚ್ಚು ಸಹಕಾರಿಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.