<p><strong>ಕನಕಪುರ: </strong>ಇಲ್ಲಿನ ದೇಗುಲಮಠದಲ್ಲಿ ನೂತನವಾಗಿ ಪ್ರಾರಂಭಿಸಿರುವ ಆದಿನಿರ್ವಾಣ ಶಿವಯೋಗಿಗಳ ಜಾತ್ರಾ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಸಚಿವ ವಿ.ಸೋಮಣ್ಣ ಮಹಾರಥೋತ್ಸವ ಹಾಗೂ ಕಲಾ ತಂಡಗಳಿಗೆ ಚಾಲನೆ ನೀಡಿದರು.</p>.<p>ಆವರಣದಿಂದ ಪ್ರಾರಂಭಗೊಂಡ ತೇರು ಕಲಾತಂಡಗಳೊಂದಿಗೆ ಚಿಕ್ಕಮಠದ ಆವರಣದವರೆಗೂ ಸಾಗಿತು. ನೆರೆದಿದ್ದ ಸಾವಿರಾರು ಭಕ್ತರು ಮಹಾತೇರು ಎಳೆದರು.</p>.<p>ಪಟದ ಕುಣಿತ, ಡೊಳ್ಳುಕುಣಿತ, ಗಾರುಡಿ ಗೊಂಬೆಗಳ ಪ್ರದರ್ಶನ ಜನರನ್ನು ಆಕರ್ಷಿಸಿತು. ಪೂಜಾ ಕುಣಿತ, ವೀರಭದ್ರ ವೇಷ ಮತ್ತಿತರ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.</p>.<p>ಮಠದ ವತಿಯಿಂದ ತಿಂಡಿ ಮತ್ತು ಊಟದ ವ್ಯವಸ್ಥೆ ವಿಶೇಷವಾಗಿ ಮಾಡಲಾಗಿತ್ತು. ಸಂಗೀತ ನಿರ್ದೇಶಕ ಕೆ.ಎಂ.ಇಂದ್ರ ಸಾರಥ್ಯದಲ್ಲಿ ಕಡಬಗೆರೆ ಮುನಿರಾಜು ಮತ್ತು ತಂಡದವರು ಭಕ್ತಿಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಜೆಡಿಎಸ್ ಹಿರಿಯ ನಾಯಕ ಪಿ.ಜಿ.ಆರ್.ಸಿಂಧ್ಯ, ಬಿಜೆಪಿ ಮುಖಂಡ ನೆ.ಲ ನರೇಂದ್ರಬಾಬು, ಜಿಲ್ಲಾ ಘಟಕದ ಅಧ್ಯಕ್ಷ ಎಂ.ರುದ್ರೇಶ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ನಾಗರಾಜು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<p>ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮೀಜಿ, ಮುರುಘಾಮಠದ ಶಿವಮೂರ್ತಿ ಮುರುಘಾಶರಣರು, ದೇಗುಲಮಠದ ಮುಮ್ಮಡಿ ನಿರ್ವಾಣಸ್ವಾಮೀಜಿ, ಬೇಲಿಮಠದ ಶಿವರುದ್ರಸ್ವಾಮೀಜಿ, ದೇಗುಲಮಠದ ಚನ್ನಬಸವಸ್ವಾಮೀಜಿ, ಮರಳೇಗವಿಮಠದ ಮುಮ್ಮಡಿ ಶಿವರುದ್ರಸ್ವಾಮಿ, ಶಿವಗಿರಿ ಕ್ಷೇತ್ರದ ಅನ್ನದಾನೇಶ್ವರನಾಥಸ್ವಾಮಿ ಸಾನ್ನಿಧ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಇಲ್ಲಿನ ದೇಗುಲಮಠದಲ್ಲಿ ನೂತನವಾಗಿ ಪ್ರಾರಂಭಿಸಿರುವ ಆದಿನಿರ್ವಾಣ ಶಿವಯೋಗಿಗಳ ಜಾತ್ರಾ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಸಚಿವ ವಿ.ಸೋಮಣ್ಣ ಮಹಾರಥೋತ್ಸವ ಹಾಗೂ ಕಲಾ ತಂಡಗಳಿಗೆ ಚಾಲನೆ ನೀಡಿದರು.</p>.<p>ಆವರಣದಿಂದ ಪ್ರಾರಂಭಗೊಂಡ ತೇರು ಕಲಾತಂಡಗಳೊಂದಿಗೆ ಚಿಕ್ಕಮಠದ ಆವರಣದವರೆಗೂ ಸಾಗಿತು. ನೆರೆದಿದ್ದ ಸಾವಿರಾರು ಭಕ್ತರು ಮಹಾತೇರು ಎಳೆದರು.</p>.<p>ಪಟದ ಕುಣಿತ, ಡೊಳ್ಳುಕುಣಿತ, ಗಾರುಡಿ ಗೊಂಬೆಗಳ ಪ್ರದರ್ಶನ ಜನರನ್ನು ಆಕರ್ಷಿಸಿತು. ಪೂಜಾ ಕುಣಿತ, ವೀರಭದ್ರ ವೇಷ ಮತ್ತಿತರ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.</p>.<p>ಮಠದ ವತಿಯಿಂದ ತಿಂಡಿ ಮತ್ತು ಊಟದ ವ್ಯವಸ್ಥೆ ವಿಶೇಷವಾಗಿ ಮಾಡಲಾಗಿತ್ತು. ಸಂಗೀತ ನಿರ್ದೇಶಕ ಕೆ.ಎಂ.ಇಂದ್ರ ಸಾರಥ್ಯದಲ್ಲಿ ಕಡಬಗೆರೆ ಮುನಿರಾಜು ಮತ್ತು ತಂಡದವರು ಭಕ್ತಿಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಜೆಡಿಎಸ್ ಹಿರಿಯ ನಾಯಕ ಪಿ.ಜಿ.ಆರ್.ಸಿಂಧ್ಯ, ಬಿಜೆಪಿ ಮುಖಂಡ ನೆ.ಲ ನರೇಂದ್ರಬಾಬು, ಜಿಲ್ಲಾ ಘಟಕದ ಅಧ್ಯಕ್ಷ ಎಂ.ರುದ್ರೇಶ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ನಾಗರಾಜು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<p>ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮೀಜಿ, ಮುರುಘಾಮಠದ ಶಿವಮೂರ್ತಿ ಮುರುಘಾಶರಣರು, ದೇಗುಲಮಠದ ಮುಮ್ಮಡಿ ನಿರ್ವಾಣಸ್ವಾಮೀಜಿ, ಬೇಲಿಮಠದ ಶಿವರುದ್ರಸ್ವಾಮೀಜಿ, ದೇಗುಲಮಠದ ಚನ್ನಬಸವಸ್ವಾಮೀಜಿ, ಮರಳೇಗವಿಮಠದ ಮುಮ್ಮಡಿ ಶಿವರುದ್ರಸ್ವಾಮಿ, ಶಿವಗಿರಿ ಕ್ಷೇತ್ರದ ಅನ್ನದಾನೇಶ್ವರನಾಥಸ್ವಾಮಿ ಸಾನ್ನಿಧ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>