ಚನ್ನಪಟ್ಟಣ ತಾಲ್ಲೂಕಿನ ರಾಂಪುರದಲ್ಲಿ ಸಿ.ಪಿ. ಯೋಗೇಶ್ವರ್ ಬೆಳಗ್ಗೆ ಕಾಮಗಾರಿಗೆ ಚಾಲನೆ ನೀಡುವ ಮುನ್ನವೇ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ಆರಂಭಿಸಿದರು. ಬಳಿಕ ಬೈರಾಪಟ್ಟಣ, ಪಟ್ಲು, ಅಕ್ಕೂರು–ಹೊಸಹಳ್ಳಿ, ಕೋಡಂಬಳ್ಳಿ ಸೇರಿದಂತೆ ಕಾರ್ಯಕ್ರಮ ನಿಗದಿಯಾಗಿದ್ದ ಐದು ಗ್ರಾಮಗಳಲ್ಲಿಯೂ ಪ್ರತಿಭಟನೆ ನಡೆಯಿತು. ಯೋಗೇಶ್ವರ್ ಪೊಲೀಸ್ ಭದ್ರತೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.