ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಪೂಜೆ ಸಲ್ಲಿಸಿದ ಬಳಿಕ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಕಾಂಗ್ರೆಸ್ನಲ್ಲಿ ಸಿ.ಎಂ. ಕುರ್ಚಿಗೆ ಟವಲ್ ಹಾಕಿರುವ ಒಬ್ಬರು, 'ಈಗಿನ ಸಿ.ಎಂ. ಭ್ರಷ್ಟರು. ಮುಂದೆ ಬರುವವರು ಭ್ರಷ್ಟರೇ' ಎನ್ನುತ್ತಾರೆ. ಆದರೆ ಇನ್ನೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡುತ್ತಾರೆ. ಇದೆಲ್ಲ ಓಲೈಕೆಗೆ ಅಷ್ಟೇ ಎಂದರು.