ಕಾಂಗ್ರೆಸ್ನವರು ನೀಡಿದ ದೂರಿನ ಮೇರೆಗೆ ಹಬ್ಬದೂಟ ತಡೆಯೊಡ್ಡಿರುವ ಚುನಾವಣಾ ಅಧಿಕಾರಿಗಳು, ರಾಜ್ಯ ಸರ್ಕಾರದ ಕೈಗೊಂಬೆಗಳಾಗಿರುವುದು ಸ್ಪಷ್ಟ. ರಾಮನಗರದಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಸೀರೆ ಮತ್ತು ಡ್ರೆಸ್ ಪೀಸ್ ಅನ್ನು ಸಹ ಮೈತ್ರಿ ಪಕ್ಷದ ಕಾರ್ಯಕರ್ತರೇ ಪತ್ತೆ ಹಚ್ಚಿ ಹಿಡಿದುಕೊಟ್ಟರು. ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ ಎಂಬುದು ಇದರಲ್ಲೇ ಗೊತ್ತಾಗುತ್ತದೆ ಎಂದರು.