<p><strong>ರಾಮನಗರ</strong>; ಬಿಡದಿಯ ಕೇತಗಾನಹಳ್ಳಿಯ ಕುಮಾರಸ್ವಾಮಿ ಅವರ ತೋಟದ ಆವರಣದಲ್ಲಿ ಸೋಮವಾರ ಜೆಡಿಎಸ್ ಸಂಘಟನಾ ಕಾರ್ಯಾಗಾರಕ್ಕೆ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಚಾಲನೆ ನೀಡಿದರು.</p>.<p>ಪಕ್ಷದ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, 'ಕಾರ್ಯಾಗಾರದಲ್ಲಿ 123 ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದೆ. ಇವರಿಗೆ ಗ್ರೀನ್ ಕಾರ್ಡ್ ವಿತರಣೆ ಮಾಡಲಾಗುವುದು. ಮುಂದಿನ ಜನವರಿವರೆಗೆ ಅವರ ಕಾರ್ಯಗಳನ್ನು ನೋಡಿ ನಂತರ ಟಿಕೆಟ್ ಬಗ್ಗೆ ಅಂತಿಮವಾಗಿ ತೀರ್ಮಾನಿಸಲಾಗುವುದು' ಎಂದರು.</p>.<p>'ನಮ್ಮ ಪಕ್ಷದಿಂದ ಶಕ್ತಿ ಪಡೆದುಕೊಂಡು ಬೇರೆ ಬೇರೆ ಪಕ್ಷಕ್ಕೆ ಹೋಗಿ ಮುಖ್ಯಮಂತ್ರಿ ಆಗಿದ್ದಾರೆ. ನಮ್ಮ ಪಕ್ಷದಿಂದಲೇ ಬೆಳೆದ ನಾಯಕರೊಬ್ಬರು ನಮ್ಮ ಪಕ್ಷದ ವಿರುದ್ಧವೇ ಮಾತನಾಡುತ್ತಾರೆ' ಎಂದು ಟೀಕಿಸಿದರು.</p>.<p>'ಮುಂದಿನ 17 ತಿಂಗಳು ನಿರಂತರವಾಗಿ ಪಕ್ಷದ ಕಾರ್ಯಕ್ರಮಗಳು ನಡೆಯಲಿವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಹಿಡಿಯಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>; ಬಿಡದಿಯ ಕೇತಗಾನಹಳ್ಳಿಯ ಕುಮಾರಸ್ವಾಮಿ ಅವರ ತೋಟದ ಆವರಣದಲ್ಲಿ ಸೋಮವಾರ ಜೆಡಿಎಸ್ ಸಂಘಟನಾ ಕಾರ್ಯಾಗಾರಕ್ಕೆ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಚಾಲನೆ ನೀಡಿದರು.</p>.<p>ಪಕ್ಷದ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, 'ಕಾರ್ಯಾಗಾರದಲ್ಲಿ 123 ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದೆ. ಇವರಿಗೆ ಗ್ರೀನ್ ಕಾರ್ಡ್ ವಿತರಣೆ ಮಾಡಲಾಗುವುದು. ಮುಂದಿನ ಜನವರಿವರೆಗೆ ಅವರ ಕಾರ್ಯಗಳನ್ನು ನೋಡಿ ನಂತರ ಟಿಕೆಟ್ ಬಗ್ಗೆ ಅಂತಿಮವಾಗಿ ತೀರ್ಮಾನಿಸಲಾಗುವುದು' ಎಂದರು.</p>.<p>'ನಮ್ಮ ಪಕ್ಷದಿಂದ ಶಕ್ತಿ ಪಡೆದುಕೊಂಡು ಬೇರೆ ಬೇರೆ ಪಕ್ಷಕ್ಕೆ ಹೋಗಿ ಮುಖ್ಯಮಂತ್ರಿ ಆಗಿದ್ದಾರೆ. ನಮ್ಮ ಪಕ್ಷದಿಂದಲೇ ಬೆಳೆದ ನಾಯಕರೊಬ್ಬರು ನಮ್ಮ ಪಕ್ಷದ ವಿರುದ್ಧವೇ ಮಾತನಾಡುತ್ತಾರೆ' ಎಂದು ಟೀಕಿಸಿದರು.</p>.<p>'ಮುಂದಿನ 17 ತಿಂಗಳು ನಿರಂತರವಾಗಿ ಪಕ್ಷದ ಕಾರ್ಯಕ್ರಮಗಳು ನಡೆಯಲಿವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಹಿಡಿಯಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>