ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಈ ಬಗ್ಗೆ ಎರಡೂ ರಾಜಕೀಯ ಪಕ್ಷಗಳು ಗಾಳಿ ಸುದ್ದಿ ಹಬ್ಬಿಸುತ್ತಿವೆ. ಈವರೆಗೂ ನಮ್ಮ ಪಕ್ಷದಿಂದ ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಅವರೇ ಬೇಕಾದಾಗ ನಮ್ಮ ಮನೆಗೆ ಬಂದು ಕಾಲು ಹಿಡಿದುಕೊಂಡಿದ್ದಾರೆ. ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆ ಎಂದು ಅವರ ಜೊತೆ ಕೈಜೋಡಿಸೋಣ ಎಂದು ಪ್ರಶ್ನಿಸಿದರು.