ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ‘ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಸೋಲು ಕರ್ನಾಟಕದ ಸೋಲು, ಸ್ವಾಭಿಮಾನದ ಸೋಲಾಗಿದೆ. ಹೋರಾಟದ ಬದುಕಿನ ಮೂಲಕ ರಾಜಕಾರಣದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ ದೇವೇಗೌಡರು ಕಾವೇರಿ ಹೋರಾಟ ಸೇರಿದಂತೆ ಹಲವು ಹೋರಾಟಗಳಿಗೆ ಜೀವ ತುಂಬಿ ಅಜೇಯರಾಗಿ ಉಳಿದಿದ್ದಾರೆ. ಸ್ತ್ರೀ ಸಬಲೀಕರಣಕ್ಕೆ ಮಹಿಳಾ ಮೀಸಲಾತಿಗೆ ಮುನ್ನುಡಿ ಬರೆದ ಸಮಾಜಮುಖಿ ಅವರು. ಎಲ್ಲ ಕನ್ನಡಿಗರ ಹೆಮ್ಮೆಯ ಪ್ರತೀಕವಾಗಿರವ ಅವರ ಹೋರಾಟ ಮರೆತು, ಇಳಿ ವಯಸ್ಸಿನಲ್ಲಿ ಅವರಿಗೆ ಸೋಲಿನ ಆಘಾತ ನೀಡಿರುವುದು ದುರದೃಷ್ಟಕರ’ ಎಂದಿದ್ದಾರೆ.