ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪದೇ ಪದೇ ತಮ್ಮ ದಲಿತ ವಿರೋಧಿ ನೀತಿಯನ್ನು ಬಹಿರಂಗ ಪಡಿಸುತ್ತಿದ್ದಾರೆ. ಈ ಹಿಂದೆ, ಸಿ.ಎಂ.ಇಬ್ರಾಹಿಂ ಮುಖ್ಯಮಂತ್ರಿ ಯಾಕಾಗಬಾರದು, ಅವರೇನು ಅಸ್ಪೃಶ್ಯರ ಎಂದು ಕೇಳಿ ದಲಿತ ಸಮುದಾಯವನ್ನು ಅವಮಾನಿಸಿದ್ದರು. ಈಗ ನಮ್ಮ ಸಮುದಾಯದ ನಾಯಕರ ಮೇಲೆ ನಡೆದ ಹಲ್ಲೆಯನ್ನು ನಾಟಕ ಎನ್ನುತ್ತಿದ್ದಾರೆ. ಹಾಗಿದ್ದರೆ, ಮೈಸೂರಿನಲ್ಲಿ ನಡೆದ ಜೆಡಿಎಸ್ ಸಮಾವೇಶಕ್ಕೆ ಎಚ್.ಡಿ. ದೇವೇಗೌಡರನ್ನು ವೀಲ್ಚೇರ್ ಮೇಲೆ ಕರೆತಂದಿದ್ದನ್ನು ನಾಟಕ ಎನ್ನಬಹುದೇ? ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.