<p><strong>ರಾಮನಗರ:</strong> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಗುರುವಾರ ನಡೆದ ಬಹಿರಂಗ ಸಭೆ ವರದಿಗೆ ಬಂದಿದ್ದ ಪತ್ರಕರ್ತರಿಬ್ಬರು ಕಿತ್ತಾಡಿಕೊಂಡಿದ್ದಾರೆ.</p>.<p>ಪಿಟಿಐ ವರದಿಗಾರ್ತಿ ಎಲಿಜಬೆತ್ ಕುರಿಯನ್ ಅವರ ಮೇಲೆ ಎಎನ್ಐ ವರದಿಗಾರ ರಾಘವೇಂದ್ರ ರಾವ್ ಅವರು ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಸುರೇಶ್ ಅವರ ಪಕ್ಕವೇ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಇಬ್ಬರೂ ದೂರು–ಪ್ರತಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.</p>.<p>ರ್ಯಾಲಿ ಮತ್ತು ಬಹಿರಂಗ ಸಭೆಯ ವರದಿಗೆ ಅನುಕೂಲವಾಗುವಂತೆ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮದವರಿಗೆ ತೆರೆದ ವಾಹನದ ವ್ಯವಸ್ಥೆ ಮಾಡಲಾಗಿತ್ತು. ಸುರೇಶ್ ಅವರು ಭಾಷಣ ಮಾಡುವಾಗ ಮೈಕ್ ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ತಳ್ಳಾಟ ಮತ್ತು ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಾಘವೇಂದ್ರ ಅವರು ಎಲಿಜಬೆತ್ ಅವರ ಕೆನ್ನೆಗೆ ಹೊಡೆದಿದ್ದಾರೆ.</p>.<p>ಸ್ಥಳದಲ್ಲಿದ್ದ ವರದಿಗಾರರು ಹಾಗೂ ಕಾಂಗ್ರೆಸ್ ಮುಖಂಡರು, ‘ಹೆಣ್ಣು ಮಗಳ ಮೇಲೆ ಹಲ್ಲೆ ಮಾಡುತ್ತೀಯಾ’ ಎಂದು ರಾಘವೇಂದ್ರ ರಾವ್ ಅವರನ್ನು ತಡೆದು, ಜಗಳ ಬಿಡಿಸಿದ್ದಾರೆ. ಇಬ್ಬರೂ ಪರಸ್ಪರ ದೂರು, ಪ್ರತಿದೂರು ಕೊಟ್ಟಿದ್ದಾರೆ.</p>.<p>‘ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿ ಎಲಿಜಬೆತ್ ಅವರು ದೂರು ಕೊಟ್ಟಿದ್ದಾರೆ. ‘ಕೆಟ್ಟ ಪದಗಳಲ್ಲಿ ನಿಂದಿಸಿದ ಎಲಿಜಬೆತ್ ಅವರು ಕೈಯಲ್ಲಿದ್ದ ಮೈಕ್ನಿಂದ ಮುಖಕ್ಕೆ ಹೊಡೆದಿದ್ದಾರೆ’ ಎಂದು ರಾಘವೇಂದ್ರ ದೂರು ನೀಡಿದ್ದಾರೆ.</p>.<p>ಘಟನೆ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೊ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿರುವ ರಾಘವೇಂದ್ರ ರಾವ್ ಅವರು, ‘ನನ್ನ ತಾಯಿ ಕುರಿತು ಎಲಿಜಬೆತ್ ಕೆಟ್ಟದಾಗಿ ಬೈದಿದ್ದೇ ಘಟನೆಗೆ ಕಾರಣ’ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಗುರುವಾರ ನಡೆದ ಬಹಿರಂಗ ಸಭೆ ವರದಿಗೆ ಬಂದಿದ್ದ ಪತ್ರಕರ್ತರಿಬ್ಬರು ಕಿತ್ತಾಡಿಕೊಂಡಿದ್ದಾರೆ.</p>.<p>ಪಿಟಿಐ ವರದಿಗಾರ್ತಿ ಎಲಿಜಬೆತ್ ಕುರಿಯನ್ ಅವರ ಮೇಲೆ ಎಎನ್ಐ ವರದಿಗಾರ ರಾಘವೇಂದ್ರ ರಾವ್ ಅವರು ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಸುರೇಶ್ ಅವರ ಪಕ್ಕವೇ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಇಬ್ಬರೂ ದೂರು–ಪ್ರತಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.</p>.<p>ರ್ಯಾಲಿ ಮತ್ತು ಬಹಿರಂಗ ಸಭೆಯ ವರದಿಗೆ ಅನುಕೂಲವಾಗುವಂತೆ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮದವರಿಗೆ ತೆರೆದ ವಾಹನದ ವ್ಯವಸ್ಥೆ ಮಾಡಲಾಗಿತ್ತು. ಸುರೇಶ್ ಅವರು ಭಾಷಣ ಮಾಡುವಾಗ ಮೈಕ್ ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ತಳ್ಳಾಟ ಮತ್ತು ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಾಘವೇಂದ್ರ ಅವರು ಎಲಿಜಬೆತ್ ಅವರ ಕೆನ್ನೆಗೆ ಹೊಡೆದಿದ್ದಾರೆ.</p>.<p>ಸ್ಥಳದಲ್ಲಿದ್ದ ವರದಿಗಾರರು ಹಾಗೂ ಕಾಂಗ್ರೆಸ್ ಮುಖಂಡರು, ‘ಹೆಣ್ಣು ಮಗಳ ಮೇಲೆ ಹಲ್ಲೆ ಮಾಡುತ್ತೀಯಾ’ ಎಂದು ರಾಘವೇಂದ್ರ ರಾವ್ ಅವರನ್ನು ತಡೆದು, ಜಗಳ ಬಿಡಿಸಿದ್ದಾರೆ. ಇಬ್ಬರೂ ಪರಸ್ಪರ ದೂರು, ಪ್ರತಿದೂರು ಕೊಟ್ಟಿದ್ದಾರೆ.</p>.<p>‘ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿ ಎಲಿಜಬೆತ್ ಅವರು ದೂರು ಕೊಟ್ಟಿದ್ದಾರೆ. ‘ಕೆಟ್ಟ ಪದಗಳಲ್ಲಿ ನಿಂದಿಸಿದ ಎಲಿಜಬೆತ್ ಅವರು ಕೈಯಲ್ಲಿದ್ದ ಮೈಕ್ನಿಂದ ಮುಖಕ್ಕೆ ಹೊಡೆದಿದ್ದಾರೆ’ ಎಂದು ರಾಘವೇಂದ್ರ ದೂರು ನೀಡಿದ್ದಾರೆ.</p>.<p>ಘಟನೆ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೊ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿರುವ ರಾಘವೇಂದ್ರ ರಾವ್ ಅವರು, ‘ನನ್ನ ತಾಯಿ ಕುರಿತು ಎಲಿಜಬೆತ್ ಕೆಟ್ಟದಾಗಿ ಬೈದಿದ್ದೇ ಘಟನೆಗೆ ಕಾರಣ’ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>