<p><strong>ಚನ್ನಪಟ್ಟಣ:</strong> ‘ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯಕ’ ಎಂದು ಅಕ್ಕೂರು ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಭಾಸ್ಕರ್ ಹೇಳಿದರು.</p>.<p>ಇಲ್ಲಿನ ಗುಡಿಸರಗೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕೇವಲ ಗ್ರಾಮೀಣ ಪ್ರದೇಶದ ಕ್ರೀಡೆಯಾಗಿದ್ದ ಕಬ್ಬಡಿ ಈಗ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿದೆ. ಇದು ಕಬಡ್ಡಿ ಮಹತ್ವವನ್ನು ಎತ್ತಿ ಹಿಡಿದಿದೆ’ ಎಂದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಿ ಸೋದರತ್ವ ಹಾಗೂ ಸ್ನೇಹ ಮೌಲ್ಯವನ್ನು ಬಿಂಬಿಸಲು ಹೊರಟಿರುವುದು ಸ್ವಾಗತಾರ್ಹ ಬೆಳವಣಿಗೆ. ಯುವಕರು ಯಾವುದೇ ಕೆಟ್ಟ ಚಟಗಳನ್ನು ಬೆಳೆಸಿಕೊಳ್ಳದೆ ಇಂತಹ ಆರೋಗ್ಯಕರ ವಾತಾವರಣ ನಿರ್ಮಿಸಿರುವುದು ಪ್ರಶಂಸನೀಯ. ಯುವಕರಲ್ಲಿ ಈ ರೀತಿಯ ಬೆಳವಣಿಗೆಗಳು ಸೃಷ್ಟಿಯಾಗಿರುವುದು ಸಂತಸದ ವಿಚಾರ’ ಎಂದರು.</p>.<p>ಗ್ರಾಮದ ಮುಖಂಡರಾದ ಕೃಷ್ಣಪ್ರಸಾದ್, ಶಿವಲಿಂಗೇಗೌಡ, ಬಸವರಾಜೆ ಅರಸ್, ಪೊಲೀಸ್ ಕಾನ್ ಸ್ಟೇಬಲ್ ಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ‘ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯಕ’ ಎಂದು ಅಕ್ಕೂರು ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಭಾಸ್ಕರ್ ಹೇಳಿದರು.</p>.<p>ಇಲ್ಲಿನ ಗುಡಿಸರಗೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕೇವಲ ಗ್ರಾಮೀಣ ಪ್ರದೇಶದ ಕ್ರೀಡೆಯಾಗಿದ್ದ ಕಬ್ಬಡಿ ಈಗ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿದೆ. ಇದು ಕಬಡ್ಡಿ ಮಹತ್ವವನ್ನು ಎತ್ತಿ ಹಿಡಿದಿದೆ’ ಎಂದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಿ ಸೋದರತ್ವ ಹಾಗೂ ಸ್ನೇಹ ಮೌಲ್ಯವನ್ನು ಬಿಂಬಿಸಲು ಹೊರಟಿರುವುದು ಸ್ವಾಗತಾರ್ಹ ಬೆಳವಣಿಗೆ. ಯುವಕರು ಯಾವುದೇ ಕೆಟ್ಟ ಚಟಗಳನ್ನು ಬೆಳೆಸಿಕೊಳ್ಳದೆ ಇಂತಹ ಆರೋಗ್ಯಕರ ವಾತಾವರಣ ನಿರ್ಮಿಸಿರುವುದು ಪ್ರಶಂಸನೀಯ. ಯುವಕರಲ್ಲಿ ಈ ರೀತಿಯ ಬೆಳವಣಿಗೆಗಳು ಸೃಷ್ಟಿಯಾಗಿರುವುದು ಸಂತಸದ ವಿಚಾರ’ ಎಂದರು.</p>.<p>ಗ್ರಾಮದ ಮುಖಂಡರಾದ ಕೃಷ್ಣಪ್ರಸಾದ್, ಶಿವಲಿಂಗೇಗೌಡ, ಬಸವರಾಜೆ ಅರಸ್, ಪೊಲೀಸ್ ಕಾನ್ ಸ್ಟೇಬಲ್ ಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>