<p><strong>ಕನಕಪುರ:</strong> ಸಾತನೂರು ಕಬ್ಬಾಳು ರಸ್ತೆಯ ರಾಮೇಗೌಡನದೊಡ್ಡಿ ಗ್ರಾಮದ ಬಳಿ ಮಂಗಳವಾರ ರಾತ್ರಿ ಆಟೊ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೊದಲ್ಲಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಟೊದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಬೆಂಗಳೂರು ಮಲ್ಲೇಶ್ವರದ ನಿವಾಸಿ ಲೋಕೇಶ್ (48) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಲೋಕೇಶ್ ಸ್ನೇಹಿತರಾದ ಪ್ರದೀಪ್ ಮತ್ತು ಶಿವಕುಮಾರ್ ಗಾಯಗೊಂಡಿದ್ದಾರೆ. </p>.<p>ಲೋಕೇಶ್ ಸ್ನೇಹಿತರಾದ ಪ್ರದೀಪ್ ಮತ್ತು ಶಿವಕುಮಾರ್ ಜೊತೆ ಆಟೊದಲ್ಲಿ ಬೆಂಗಳೂರಿನಿಂದ ಮಂಗಳವಾರ ಬೆಳಗ್ಗೆ ಕನಕಪುರ ತಾಲ್ಲೂಕಿನ ಕಬ್ಬಾಳಮ್ಮ ದೇವಾಲಯಕ್ಕೆ ಬಂದಿದ್ದರು. </p>.<p>ದೇವಾಲಯ ದರ್ಶನ ಮುಗಿಸಿಕೊಂಡು ರಾತ್ರಿ ಆಟೊದಲ್ಲಿ ಚನ್ನಪಟ್ಟಣ ಮಾರ್ಗವಾಗಿ ಮರಳುವಾಗ ರಾಮೇಗೌಡನದೊಡ್ಡಿ ಎದುರಿನಿಂದ ಬಂದ ಕಾರು ಕಾರು ಆಟೊಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಟೊ ನಜ್ಜು ಗುಜ್ಜಾಗಿದ್ದು ಅದರಲ್ಲಿದ್ದ ಲೋಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಜೊತೆಯಲಿದ್ದ ಪ್ರದೀಪ್ ಮತ್ತು ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಸಾತನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಲಿಸರು ಎರಡೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಸಾತನೂರು ಕಬ್ಬಾಳು ರಸ್ತೆಯ ರಾಮೇಗೌಡನದೊಡ್ಡಿ ಗ್ರಾಮದ ಬಳಿ ಮಂಗಳವಾರ ರಾತ್ರಿ ಆಟೊ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೊದಲ್ಲಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಟೊದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಬೆಂಗಳೂರು ಮಲ್ಲೇಶ್ವರದ ನಿವಾಸಿ ಲೋಕೇಶ್ (48) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಲೋಕೇಶ್ ಸ್ನೇಹಿತರಾದ ಪ್ರದೀಪ್ ಮತ್ತು ಶಿವಕುಮಾರ್ ಗಾಯಗೊಂಡಿದ್ದಾರೆ. </p>.<p>ಲೋಕೇಶ್ ಸ್ನೇಹಿತರಾದ ಪ್ರದೀಪ್ ಮತ್ತು ಶಿವಕುಮಾರ್ ಜೊತೆ ಆಟೊದಲ್ಲಿ ಬೆಂಗಳೂರಿನಿಂದ ಮಂಗಳವಾರ ಬೆಳಗ್ಗೆ ಕನಕಪುರ ತಾಲ್ಲೂಕಿನ ಕಬ್ಬಾಳಮ್ಮ ದೇವಾಲಯಕ್ಕೆ ಬಂದಿದ್ದರು. </p>.<p>ದೇವಾಲಯ ದರ್ಶನ ಮುಗಿಸಿಕೊಂಡು ರಾತ್ರಿ ಆಟೊದಲ್ಲಿ ಚನ್ನಪಟ್ಟಣ ಮಾರ್ಗವಾಗಿ ಮರಳುವಾಗ ರಾಮೇಗೌಡನದೊಡ್ಡಿ ಎದುರಿನಿಂದ ಬಂದ ಕಾರು ಕಾರು ಆಟೊಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಟೊ ನಜ್ಜು ಗುಜ್ಜಾಗಿದ್ದು ಅದರಲ್ಲಿದ್ದ ಲೋಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಜೊತೆಯಲಿದ್ದ ಪ್ರದೀಪ್ ಮತ್ತು ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಸಾತನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಲಿಸರು ಎರಡೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>