‘ಕಬ್ಬಾಳು ಗುರುವಿನಪುರ ರಸ್ತೆಯಲ್ಲಿ ಸಾಕಷ್ಟು ವಾಹನ ಸವಾರರು ಬಿದ್ದು, 100ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ. ಗುತ್ತಿಗೆದಾರ ಕಾಮಗಾರಿ ಮಾಡಿರುವುದಕ್ಕಿಂತ ಹೆಚ್ಚಿನ ಹಣ ಪಡೆದಿದ್ದಾರೆ. ಇಲಾಖೆ ಅಧಿಕಾರಿಗಳು ಕಾಮಗಾರಿ ಸ್ಥಗಿತವಾಗಿದ್ದರೂ ಸಂಬಂಧಪಟ್ಟರಿಂದ ಕೆಲಸ ಮಾಡಿಸದೆ ಬಿಟ್ಟಿರುವುದೆ ಅಪಘಾತಕ್ಕೆ ಕಾರಣವಾಗಿದೆ. ಇದರ ಬಗ್ಗೆ ದೂರುಕೊಟ್ಟಿದ್ದು ಎಸಿಬಿಯಲ್ಲಿ ಪ್ರಕರಣ ದಾಖಲಿಸಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಹೋರಾಟ ನಡೆಸುತ್ತೇನೆ’ ಎಂದು ಕಂಚನಹಳ್ಳಿ ರವಿಕುಮಾರ್ ಹೇಳಿದರು.