ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಮನಗರದ ಕಂದಾಯ ಭಾವನದ ಇಲಾಖೆಯ ಕಚೇರಿಯಲ್ಲಿ ಸೋಮವಾರ ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ವಿ. ಸುರೇಶ್ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಹಾಗೂ ಇತರರು ಇದ್ದಾರೆ
‘ಜಾತಿಗೆ ಸೀಮಿತಗೊಳಿಸಬೇಡಿ’
‘ಕನಕದಾಸರನ್ನು ಕೇವಲ ಒಂದು ಜಾತಿಗೆ ಸೀಮಿತಗೊಳಿಸಬಾರದು. ಅವರ ಕೀರ್ತನೆಗಳು ಪದಗಳು ಹಾಗೂ ಬದುಕು ಇಡೀ ಮನುಕುಲಕ್ಕೆ ಮಾರ್ಗದರ್ಶಿಯಾಗಿವೆ. ಅಂತಹ ಆದರ್ಶ ಪುರುಷನ ಸಂದೇಶವನ್ನು ಎಲ್ಲಾ ಜಾತಿ–ಧರ್ಮದವರಿಗೂ ತಲುಪಿಸಿ ಸೌಹಾರ್ದ ಸಮಾಜ ನಿರ್ಮಿಸಬೇಕಾದ ಕರ್ತವ್ಯ ಸರ್ಕಾರದ್ದಾಗಿದೆ. ಸಮುದಾಯವೂ ಈ ನಿಟ್ಟಿನಲ್ಲಿ ಕೈ ಜೋಡಿಸಲಿದೆ’ ಎಂದು ರಾಮನಗರ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ರೇಣುಕಪ್ಪ ಹೇಳಿದರು.