<h1>ಕನಕಪುರ: ಸ್ವಾತಂತ್ರ್ಯ ಲಭಿಸಿ 77 ವರ್ಷದ ಬಳಿಕ ತಾಲ್ಲೂಕಿನ ಕಸಬಾ ಹೋಬಳಿ ಚಿಕ್ಕಮುದುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಗ್ರಾಮ ಮೇದರದೊಡ್ಡಿ ಸರ್ಕಾರಿ ಬಸ್ ಸೇವೆ ಕಂಡಿದೆ. </h1>.<h1>ಗ್ರಾಮಕ್ಕೆ ಸೋಮವಾರ ಬಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಕಂಡು ಹರ್ಷಿತರಾದ ಗ್ರಾಮಸ್ಥರು ಪೂಜೆ ಸಲ್ಲಿಸಿ ಸಂಭ್ರಮಿಸಿದರು.</h1>.<h1>ಪರಿಶಿಷ್ಟ ಜಾತಿಯ 50 ಕುಟುಂಬ ಇರುವ ಈ ಕುಗ್ರಾಮಕ್ಕೆ ಇಲ್ಲಿಯವರೆಗೆ ಯಾವುದೇ ಸಾರಿಗೆ ವ್ಯವಸ್ಥೆ ಇರಲಿಲ್ಲ. ಶಾಲೆ, ಕಾಲೇಜುಗಳಿಗೆ ಹೋಗಲು ಗ್ರಾಮದ ಮಕ್ಕಳು ತುಂಬಾ ಕಷ್ಟ ಪಡಬೇಕಿತ್ತು. ರೋಗಿಗಳು ಆಸ್ಪತ್ರೆಗೆ ಹೋಗಲು ಸಾಹಸ ಮಾಡಬೇಕಿತ್ತು. </h1>.<h1>ಸುತ್ತಲೂ ಬೆಟ್ಟ, ಗುಡ್ಡಗಳಿರುವ ಈ ಗ್ರಾಮಕ್ಕೆ ಹಗಲು ವೇಳೆಯಲ್ಲೆ ಜನರು ಗ್ರಾಮಕ್ಕೆ ನಡೆದುಕೊಂಡು ಬರಲು ಸಾಹಸ ಪಡಬೇಕು. ಗ್ರಾಮದ ಬಹುತೇಕ ಜನರು ಕೂಲಿಕಾರರಾಗಿದ್ದು ಕೆಲಸ ಅರಿಸಿ ನಿತ್ಯ ನಗರ ಪ್ರದೇಶಗಳಿಗೆ ಹೋಗುತ್ತಾರೆ. ಸಾರಿಗೆ ಸೌಲಭ್ಯ ಇಲ್ಲದೆ ಪರದಾಡುತ್ತಿದ್ದರು. </h1>.<h1>ಗ್ರಾಮಕ್ಕೆ ಸಾರಿಗೆ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರ ಪರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಚಿಕ್ಕ ಮುದವಾಡಿಯ ರಾಜೀವ್ ಮೇ. 26 ರಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು. </h1>.<h1>ಗ್ರಾಮಕ್ಕೆ ಭೇಟಿ ನೀಡಿದ್ದ ಸಾರಿಗೆ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಬಸ್ ಅವಶ್ಯಕತೆ ಇರುವುದನ್ನು ಮನಗಂಡು ಇಲಾಖೆಗೆ ಶಿಫಾರಸು ಮಾಡಿದ್ದರು. </h1>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h1>ಕನಕಪುರ: ಸ್ವಾತಂತ್ರ್ಯ ಲಭಿಸಿ 77 ವರ್ಷದ ಬಳಿಕ ತಾಲ್ಲೂಕಿನ ಕಸಬಾ ಹೋಬಳಿ ಚಿಕ್ಕಮುದುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಗ್ರಾಮ ಮೇದರದೊಡ್ಡಿ ಸರ್ಕಾರಿ ಬಸ್ ಸೇವೆ ಕಂಡಿದೆ. </h1>.<h1>ಗ್ರಾಮಕ್ಕೆ ಸೋಮವಾರ ಬಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಕಂಡು ಹರ್ಷಿತರಾದ ಗ್ರಾಮಸ್ಥರು ಪೂಜೆ ಸಲ್ಲಿಸಿ ಸಂಭ್ರಮಿಸಿದರು.</h1>.<h1>ಪರಿಶಿಷ್ಟ ಜಾತಿಯ 50 ಕುಟುಂಬ ಇರುವ ಈ ಕುಗ್ರಾಮಕ್ಕೆ ಇಲ್ಲಿಯವರೆಗೆ ಯಾವುದೇ ಸಾರಿಗೆ ವ್ಯವಸ್ಥೆ ಇರಲಿಲ್ಲ. ಶಾಲೆ, ಕಾಲೇಜುಗಳಿಗೆ ಹೋಗಲು ಗ್ರಾಮದ ಮಕ್ಕಳು ತುಂಬಾ ಕಷ್ಟ ಪಡಬೇಕಿತ್ತು. ರೋಗಿಗಳು ಆಸ್ಪತ್ರೆಗೆ ಹೋಗಲು ಸಾಹಸ ಮಾಡಬೇಕಿತ್ತು. </h1>.<h1>ಸುತ್ತಲೂ ಬೆಟ್ಟ, ಗುಡ್ಡಗಳಿರುವ ಈ ಗ್ರಾಮಕ್ಕೆ ಹಗಲು ವೇಳೆಯಲ್ಲೆ ಜನರು ಗ್ರಾಮಕ್ಕೆ ನಡೆದುಕೊಂಡು ಬರಲು ಸಾಹಸ ಪಡಬೇಕು. ಗ್ರಾಮದ ಬಹುತೇಕ ಜನರು ಕೂಲಿಕಾರರಾಗಿದ್ದು ಕೆಲಸ ಅರಿಸಿ ನಿತ್ಯ ನಗರ ಪ್ರದೇಶಗಳಿಗೆ ಹೋಗುತ್ತಾರೆ. ಸಾರಿಗೆ ಸೌಲಭ್ಯ ಇಲ್ಲದೆ ಪರದಾಡುತ್ತಿದ್ದರು. </h1>.<h1>ಗ್ರಾಮಕ್ಕೆ ಸಾರಿಗೆ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರ ಪರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಚಿಕ್ಕ ಮುದವಾಡಿಯ ರಾಜೀವ್ ಮೇ. 26 ರಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು. </h1>.<h1>ಗ್ರಾಮಕ್ಕೆ ಭೇಟಿ ನೀಡಿದ್ದ ಸಾರಿಗೆ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಬಸ್ ಅವಶ್ಯಕತೆ ಇರುವುದನ್ನು ಮನಗಂಡು ಇಲಾಖೆಗೆ ಶಿಫಾರಸು ಮಾಡಿದ್ದರು. </h1>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>