<h1>ಕನಕಪುರ: ಮೂರು ದಿನಗಳ ಹಿಂದೆ ಮೈಸೂರು ರಸ್ತೆಯ ಬಾರ್ವೊಂದರಲ್ಲಿ ಮದ್ಯ ಖರೀದಿಸುತ್ತಿದ್ದ ಗೆಳೆಯರಿಬ್ಬರ ಮೇಲೆ ಹಲ್ಲೆ ನಡೆಸಿದ್ದ ನಾಲ್ವರ ವಿರುದ್ಧ ಟೌನ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.</h1>.<h1>ಕೋಡಿಹಳ್ಳಿ ಗ್ರಾಮದ ಕಿರಣ್ ಕುಮಾರ್ ಮತ್ತು ಸ್ನೇಹಿತ ಮಲ್ಲಿಕಾರ್ಜುನ ಎಂಬುವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಕನಕಪುರ ನಗರದ ಚಂದ್ರಮೌಳಿ, ಕಣ್ಣ, ಬೊಮ್ಮ, ಲಿಂಗಪ್ಪ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.</h1>.<h1>ಸ್ನೇಹಿತರಾದ ಮಲ್ಲಿಕಾರ್ಜುನ ಮತ್ತು ಮಧು ಜೊತೆ ಕಿರಣ್ ಕುಮಾರ್ ಜೂನ್ 9 ರಂದು ಮೈಸೂರು ರಸ್ತೆಯ ಬಾರ್ವೊಂದರಲ್ಲಿ ಮದ್ಯ ಖರೀದಿಸಲು ತೆರಳಿದಾಗ ನಾಲ್ವರು ಆರೋಪಿಗಳು ಹಲ್ಲೆ ನಡೆಸಿದ್ದರು.</h1>.<h1>ಆರೋಪಿಗಳು ಮಲ್ಲಿಕಾರ್ಜುನ ಮೇಲೆ ಹಲ್ಲೆ ನಡೆಸುತ್ತಿದ್ದರು. ಅದನ್ನು ತಡೆಯಲು ಹೋದ ಕಿರಣ್ಕುಮಾರ್ ಮೇಲೂ ಹಲ್ಲೆ ನಡೆಸಿದ್ದರು. </h1>.<h1>ನಾಲ್ವರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಿರಣ್ ಕುಮಾರ್ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ, ಗಲಾಟೆ ಮುಖ್ಯ ಕಾರಣ ಏನು ಎಂಬ ಮಾಹಿತಿಯನ್ನು ದೂರುದಾರರು ದೂರಿನಲ್ಲಿ ತಿಳಿಸಿಲ್ಲ. </h1>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h1>ಕನಕಪುರ: ಮೂರು ದಿನಗಳ ಹಿಂದೆ ಮೈಸೂರು ರಸ್ತೆಯ ಬಾರ್ವೊಂದರಲ್ಲಿ ಮದ್ಯ ಖರೀದಿಸುತ್ತಿದ್ದ ಗೆಳೆಯರಿಬ್ಬರ ಮೇಲೆ ಹಲ್ಲೆ ನಡೆಸಿದ್ದ ನಾಲ್ವರ ವಿರುದ್ಧ ಟೌನ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.</h1>.<h1>ಕೋಡಿಹಳ್ಳಿ ಗ್ರಾಮದ ಕಿರಣ್ ಕುಮಾರ್ ಮತ್ತು ಸ್ನೇಹಿತ ಮಲ್ಲಿಕಾರ್ಜುನ ಎಂಬುವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಕನಕಪುರ ನಗರದ ಚಂದ್ರಮೌಳಿ, ಕಣ್ಣ, ಬೊಮ್ಮ, ಲಿಂಗಪ್ಪ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.</h1>.<h1>ಸ್ನೇಹಿತರಾದ ಮಲ್ಲಿಕಾರ್ಜುನ ಮತ್ತು ಮಧು ಜೊತೆ ಕಿರಣ್ ಕುಮಾರ್ ಜೂನ್ 9 ರಂದು ಮೈಸೂರು ರಸ್ತೆಯ ಬಾರ್ವೊಂದರಲ್ಲಿ ಮದ್ಯ ಖರೀದಿಸಲು ತೆರಳಿದಾಗ ನಾಲ್ವರು ಆರೋಪಿಗಳು ಹಲ್ಲೆ ನಡೆಸಿದ್ದರು.</h1>.<h1>ಆರೋಪಿಗಳು ಮಲ್ಲಿಕಾರ್ಜುನ ಮೇಲೆ ಹಲ್ಲೆ ನಡೆಸುತ್ತಿದ್ದರು. ಅದನ್ನು ತಡೆಯಲು ಹೋದ ಕಿರಣ್ಕುಮಾರ್ ಮೇಲೂ ಹಲ್ಲೆ ನಡೆಸಿದ್ದರು. </h1>.<h1>ನಾಲ್ವರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಿರಣ್ ಕುಮಾರ್ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ, ಗಲಾಟೆ ಮುಖ್ಯ ಕಾರಣ ಏನು ಎಂಬ ಮಾಹಿತಿಯನ್ನು ದೂರುದಾರರು ದೂರಿನಲ್ಲಿ ತಿಳಿಸಿಲ್ಲ. </h1>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>