<p>ಕನಕಪುರ: ‘ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪ್ರಮುಖ ಘಟ್ಟವಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು, ಮನಸ್ಸನ್ನು ಓದಿನ ಕಡೆಗೆ ಕೇಂದ್ರೀಕರಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ರಾಮಪ್ಪ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಐ.ಗೊಲ್ಲಳ್ಳಿ ಗ್ರಾಮ ಸ್ವರಾಜ್ಯ ಪ್ರೌಢಶಾಲೆಯಲ್ಲಿ ಬುಧವಾರ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗಾಗಿ ಕೊಡುತ್ತಿರುವ ‘ಪ್ರಜಾವಾಣಿ’ ಪತ್ರಿಕೆ ವಿತರಿಸಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳಿಗೆ 10 ಮತ್ತು 12ನೇ ತರಗತಿ ಪ್ರಮುಖವಾದ ಹಂತ. ಈ ಸಮಯದಲ್ಲಿ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಒತ್ತು ಕೊಡಬೇಕು. ಹೆಚ್ಚಿನ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಪ್ರಗತಿಗೆ ‘ಪ್ರಜಾವಾಣಿ’ ಪತ್ರಿಕೆಯನ್ನು ಕೊಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>‘ವೈದ್ಯರು ಜೀವ ಉಳಿಸಿದರೆ, ಶಿಕ್ಷಕರು ಜೀವನ ರೂಪಿಸುತ್ತಾರೆ. ಸಮಾಜದಲ್ಲಿ ಒಳ್ಳೆಯ ಜೀವನ ಕಟ್ಟಿಕೊಳ್ಳಲು ಕಾರಣರಾಗುತ್ತಾರೆ. ಆಗಾಗಿ ಸಮಾಜದಲ್ಲಿ ವೈದ್ಯರು ಮತ್ತು ಶಿಕ್ಷಕರ ಬಗ್ಗೆ ಅಪಾರವಾದ ಗೌರವವಿದೆ, ಆ ಗೌರವಕ್ಕೆ ಧಕ್ಕೆ ಬರದಂತೆ ಶಿಕ್ಷಕರು ನಡೆದುಕೊಳ್ಳಬೇಕು, ತಮ್ಮ ಸ್ಥಾನಕ್ಕೆ ನ್ಯಾಯ ದೊರಕಿಸಬೇಕು’ಎಂದು ಕಿವಿಮಾತು ಹೇಳಿದರು.</p>.<p>ಇಸಿಒಗಳಾದ ರುದ್ರಮುನಿ, ಬಿ. ರಂಗಸ್ವಾಮಿ, ಶಾಲೆಯ ಹಿರಿಯ ಶಿಕ್ಷಕಿ ರೂಪಶ್ರೀ ಸೇರಿದಂತೆ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ‘ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪ್ರಮುಖ ಘಟ್ಟವಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು, ಮನಸ್ಸನ್ನು ಓದಿನ ಕಡೆಗೆ ಕೇಂದ್ರೀಕರಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ರಾಮಪ್ಪ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಐ.ಗೊಲ್ಲಳ್ಳಿ ಗ್ರಾಮ ಸ್ವರಾಜ್ಯ ಪ್ರೌಢಶಾಲೆಯಲ್ಲಿ ಬುಧವಾರ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗಾಗಿ ಕೊಡುತ್ತಿರುವ ‘ಪ್ರಜಾವಾಣಿ’ ಪತ್ರಿಕೆ ವಿತರಿಸಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳಿಗೆ 10 ಮತ್ತು 12ನೇ ತರಗತಿ ಪ್ರಮುಖವಾದ ಹಂತ. ಈ ಸಮಯದಲ್ಲಿ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಒತ್ತು ಕೊಡಬೇಕು. ಹೆಚ್ಚಿನ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಪ್ರಗತಿಗೆ ‘ಪ್ರಜಾವಾಣಿ’ ಪತ್ರಿಕೆಯನ್ನು ಕೊಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>‘ವೈದ್ಯರು ಜೀವ ಉಳಿಸಿದರೆ, ಶಿಕ್ಷಕರು ಜೀವನ ರೂಪಿಸುತ್ತಾರೆ. ಸಮಾಜದಲ್ಲಿ ಒಳ್ಳೆಯ ಜೀವನ ಕಟ್ಟಿಕೊಳ್ಳಲು ಕಾರಣರಾಗುತ್ತಾರೆ. ಆಗಾಗಿ ಸಮಾಜದಲ್ಲಿ ವೈದ್ಯರು ಮತ್ತು ಶಿಕ್ಷಕರ ಬಗ್ಗೆ ಅಪಾರವಾದ ಗೌರವವಿದೆ, ಆ ಗೌರವಕ್ಕೆ ಧಕ್ಕೆ ಬರದಂತೆ ಶಿಕ್ಷಕರು ನಡೆದುಕೊಳ್ಳಬೇಕು, ತಮ್ಮ ಸ್ಥಾನಕ್ಕೆ ನ್ಯಾಯ ದೊರಕಿಸಬೇಕು’ಎಂದು ಕಿವಿಮಾತು ಹೇಳಿದರು.</p>.<p>ಇಸಿಒಗಳಾದ ರುದ್ರಮುನಿ, ಬಿ. ರಂಗಸ್ವಾಮಿ, ಶಾಲೆಯ ಹಿರಿಯ ಶಿಕ್ಷಕಿ ರೂಪಶ್ರೀ ಸೇರಿದಂತೆ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>