<p>ಕನಕಪುರ: ತಮಿಳುನಾಡಿನ ಕೃಷ್ಣಗಿರಿ ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 39 ಜಾನುವಾರುಗಳನ್ನುಬಜರಂಗದಳದ ಕಾರ್ಯಕರ್ತರು ಬುಧವಾರ ಬೆಳಗಿನ ಜಾವ ರಕ್ಷಣೆ ಮಾಡಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ತಾಲ್ಲೂಕಿನ ತೊಪ್ಪಗನಹಳ್ಳಿ ಗ್ರಾಮದ ಬಳಿ ಕ್ಯಾಂಟರ್ ಅಡ್ಡಗಟ್ಟಿ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇಕ್ಕಟ್ಟಾದ ಜಾಗದಲ್ಲಿ 19 ಎಮ್ಮೆ, ಆರು ಸೀಮೆ ಹಸು, ಕರು ಸೇರಿದಂತೆ ಒಟ್ಟು 39 ಜಾನುವಾರುಗಳನ್ನು ಉಸಿರಾಡಲು ಆಗದಂತೆ ವಾಹನದಲ್ಲಿ ತುಂಬಲಾಗಿತ್ತು.</p>.<p>ಕ್ಯಾಂಟರ್ ಚಾಲಕ, ಜೊತೆಗಿದ್ದ ಮೈಸೂರು ಮೂಲದ ಬಲರಾಮ್ ಮತ್ತು ಸೈಯದ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಮೈಸೂರು ಕಡೆಯಿಂದ ತಮಿಳುನಾಡಿನ ಕೃಷ್ಣಗಿರಿಯ ಕಸಾಯಿಖಾನೆಗೆ ಜಾನವಾರು ಸಾಗಣೆ ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡರು.</p>.<p>ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಇಬ್ಬರನ್ನು ವಶಕ್ಕೆ ಪಡೆದರು. ಜಾನವಾರುಗಳನ್ನು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಗೋಶಾಲೆಗೆ ಕಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-14-1894063344</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ತಮಿಳುನಾಡಿನ ಕೃಷ್ಣಗಿರಿ ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 39 ಜಾನುವಾರುಗಳನ್ನುಬಜರಂಗದಳದ ಕಾರ್ಯಕರ್ತರು ಬುಧವಾರ ಬೆಳಗಿನ ಜಾವ ರಕ್ಷಣೆ ಮಾಡಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ತಾಲ್ಲೂಕಿನ ತೊಪ್ಪಗನಹಳ್ಳಿ ಗ್ರಾಮದ ಬಳಿ ಕ್ಯಾಂಟರ್ ಅಡ್ಡಗಟ್ಟಿ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇಕ್ಕಟ್ಟಾದ ಜಾಗದಲ್ಲಿ 19 ಎಮ್ಮೆ, ಆರು ಸೀಮೆ ಹಸು, ಕರು ಸೇರಿದಂತೆ ಒಟ್ಟು 39 ಜಾನುವಾರುಗಳನ್ನು ಉಸಿರಾಡಲು ಆಗದಂತೆ ವಾಹನದಲ್ಲಿ ತುಂಬಲಾಗಿತ್ತು.</p>.<p>ಕ್ಯಾಂಟರ್ ಚಾಲಕ, ಜೊತೆಗಿದ್ದ ಮೈಸೂರು ಮೂಲದ ಬಲರಾಮ್ ಮತ್ತು ಸೈಯದ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಮೈಸೂರು ಕಡೆಯಿಂದ ತಮಿಳುನಾಡಿನ ಕೃಷ್ಣಗಿರಿಯ ಕಸಾಯಿಖಾನೆಗೆ ಜಾನವಾರು ಸಾಗಣೆ ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡರು.</p>.<p>ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಇಬ್ಬರನ್ನು ವಶಕ್ಕೆ ಪಡೆದರು. ಜಾನವಾರುಗಳನ್ನು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಗೋಶಾಲೆಗೆ ಕಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-14-1894063344</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>