ದೇವಾಲಯದ ಒಳಗೆ ಮತ್ತು ಹೊರಗಡೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರು ಬೆಳಿಗ್ಗೆ 6 ಗಂಟೆಯಿಂದ ಶನಿವಾರ ರಾತ್ರಿವರೆಗೂ ದೇವರ ದರ್ಶನ ಪಡೆದರು. ಬೆಳಿಗ್ಗೆ 8 ಗಂಟೆಯಿಂದಲೇ ದೇವಾಲಯದ ಆವರಣದಲ್ಲಿ ಅನ್ನದಾಸೋಹ ಆಯೋಜಿಸಲಾಗಿತ್ತು. ದಾಸೋಹದಲ್ಲಿ ರಾಗಿಮುದ್ದೆ, ಅವರೆಕಾಳು ಸಾರು, ಪಾಯಸವನ್ನು ಬಡಿಸಲಾಯಿತು.