<p>ಕನಕಪುರ: ನೀತಿ ಸಂಹಿತೆ ಜಾರಿಯಾದರೂ ಅಭ್ಯರ್ಥಿಗಳ ಪರ ಪ್ರಚಾರದ ಗೋಡೆ ಬರಹಗಳು ರಾರಾಜಿಸುತ್ತಿವೆ. ದೂರು ನೀಡಿದರೂ ಚುನಾವನಾ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ. ಇಲ್ಲಿ ಪಾರದರ್ಶಕ ಚುನಾವಣೆ ಮಾಡಲು ಆಯೋಗ ಮುಂದಾಗುತ್ತಿಲ್ಲ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನಗೌಡ ಆರೋಪಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಕಪುರ ತಾಲ್ಲೂಕಿನಲ್ಲಿ ಕೇವಲ ಹೆಸರಿಗೆ ಮಾತ್ರ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ದೂರಿದರು.</p>.<p>ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪರ ಪ್ರಚಾರದ ಗೋಡೆ ಬರಹಗಳು ರಾರಾಜಿಸುತ್ತಿವೆ. ಅವುಗಳನ್ನು ತೆರವುಗೊಳಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು.</p>.<p>ಚುನಾವಣೆ ಸಂಬಂಧ ನಡೆಯುವ ಅಕ್ರಮದ ಬಗ್ಗೆ ದೂರು ಸಲ್ಲಿಸುವ ವ್ಯಕ್ತಿಗಳ ಮಾಹಿತಿ ಗುಪ್ತವಾಗಿ ಇಡಬೇಕು. ಆದರೆ, ರಾಮನಗರ ಜಿಲ್ಲೆ ಚುನಾವಣಾ ಅಧಿಕಾರಿಗಳು ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡದೆ ಬಹಿರಂಗಪಡಿಸಿ ದೂರುದಾರರಿಗೆ ತೊಂದರೆ ಆಗುವಂತೆ ಮಾಡುತ್ತಿದ್ದಾರೆ ಎಂದು ದೂರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ನೀತಿ ಸಂಹಿತೆ ಜಾರಿಯಾದರೂ ಅಭ್ಯರ್ಥಿಗಳ ಪರ ಪ್ರಚಾರದ ಗೋಡೆ ಬರಹಗಳು ರಾರಾಜಿಸುತ್ತಿವೆ. ದೂರು ನೀಡಿದರೂ ಚುನಾವನಾ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ. ಇಲ್ಲಿ ಪಾರದರ್ಶಕ ಚುನಾವಣೆ ಮಾಡಲು ಆಯೋಗ ಮುಂದಾಗುತ್ತಿಲ್ಲ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನಗೌಡ ಆರೋಪಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಕಪುರ ತಾಲ್ಲೂಕಿನಲ್ಲಿ ಕೇವಲ ಹೆಸರಿಗೆ ಮಾತ್ರ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ದೂರಿದರು.</p>.<p>ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪರ ಪ್ರಚಾರದ ಗೋಡೆ ಬರಹಗಳು ರಾರಾಜಿಸುತ್ತಿವೆ. ಅವುಗಳನ್ನು ತೆರವುಗೊಳಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು.</p>.<p>ಚುನಾವಣೆ ಸಂಬಂಧ ನಡೆಯುವ ಅಕ್ರಮದ ಬಗ್ಗೆ ದೂರು ಸಲ್ಲಿಸುವ ವ್ಯಕ್ತಿಗಳ ಮಾಹಿತಿ ಗುಪ್ತವಾಗಿ ಇಡಬೇಕು. ಆದರೆ, ರಾಮನಗರ ಜಿಲ್ಲೆ ಚುನಾವಣಾ ಅಧಿಕಾರಿಗಳು ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡದೆ ಬಹಿರಂಗಪಡಿಸಿ ದೂರುದಾರರಿಗೆ ತೊಂದರೆ ಆಗುವಂತೆ ಮಾಡುತ್ತಿದ್ದಾರೆ ಎಂದು ದೂರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>