<p>ಹಾರೋಹಳ್ಳಿ: ಪಟ್ಟಣಕ್ಕೆ ಕಾವೇರಿ ನೀರು ಸರಬರಾಜು ಮಾಡಲು ₹7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಓವರ್ ಹೆಡ್ ಟ್ಯಾಂಕ್ ಬಳಕೆಗೂ ಮುನ್ನವೇ ಸೋರುತ್ತಿದೆ.</p>.<p>ಕಳೆದ 4 ವರ್ಷದ ಹಿಂದೆ 7.5ಲಕ್ಷ ಲೀ. ನೀರು ಶೇಖರಿಸುವ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣ ಕಾಮಗಾರಿಯನ್ನು ಸುಮಾರು ₹7ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿತ್ತು. ಕಳೆದ ನಾಲ್ಕು ವರ್ಷದಿಂದಲೂ ಕಾಮಗಾರಿ ಕುಂಟುತ್ತಲೇ ಸಾಗಿತ್ತು. ಇದೀಗ ಕಾಮಗಾರಿ ಮುಕ್ತಾಯವಾಗಿದ್ದು. ಟ್ಯಾಂಕ್ ಅನ್ನು ಪರೀಕ್ಷಿಸಲು ನೀರು ತುಂಬಿಸಿದಾಗ ನೀರು ಸೋರಿಕೆಯಾಗಿದೆ. ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p>ಕಾಮಗಾರಿಯು ಕಳಪೆಯಿಂದ ಕೂಡಿದ್ದು, ಗುತ್ತಿಗೆದಾರರ ವಿರುಧ್ಧ ಕ್ರಮ ಕೈಗೊಳ್ಳಬೇಕು. ಇದನ್ನು ಗಮನಿಸಬೇಕಾದ ಅಧಿಕಾರಿಗಳು ಸಹ ಕರ್ತವ್ಯ ಲೋಪ ಎಸಗಿದ್ದಾರೆ. ಈ ಕೂಡಲೇ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕು ಎಂದು ಅಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಮೊದಲೇ ಬೇಸಿಗೆ ಬೇಗೆಯಿಂದ ನರಳುತ್ತಿದ್ದೇವೆ. ನೀರಿಗಾಗಿ ಎಲ್ಲೆಡೆ ಹಾಹಾಕಾರ ಪ್ರಾರಂಭವಾಗಿದೆ. ಹೀಗಿರುವಾಗ ಇಲ್ಲಿನ ಟ್ಯಾಂಕ್ ಸಂಪೂರ್ಣವಾಗಿ ಸೋರುತ್ತಿದೆ. ಆದರೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷದಿಂದ ಹತ್ತಾರು ವರುಷ ಜನರಿಗೆ ಕುಡಿಯುವ ನೀರು ಒದಗಿಸುವ ಟ್ಯಾಂಕ್ ಉದ್ಘಾಟನೆಗೂ ಮುನ್ನ ಸೋರುತ್ತಿದೆ.</p>.<p>ಇದೀಗ ಯಾವುದೋ ಒಂದು ರಾಸಾಯನಿಕ ಬಳಸಿ ಅದನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಈ ಕೂಡಲೇ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾರೋಹಳ್ಳಿ: ಪಟ್ಟಣಕ್ಕೆ ಕಾವೇರಿ ನೀರು ಸರಬರಾಜು ಮಾಡಲು ₹7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಓವರ್ ಹೆಡ್ ಟ್ಯಾಂಕ್ ಬಳಕೆಗೂ ಮುನ್ನವೇ ಸೋರುತ್ತಿದೆ.</p>.<p>ಕಳೆದ 4 ವರ್ಷದ ಹಿಂದೆ 7.5ಲಕ್ಷ ಲೀ. ನೀರು ಶೇಖರಿಸುವ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣ ಕಾಮಗಾರಿಯನ್ನು ಸುಮಾರು ₹7ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿತ್ತು. ಕಳೆದ ನಾಲ್ಕು ವರ್ಷದಿಂದಲೂ ಕಾಮಗಾರಿ ಕುಂಟುತ್ತಲೇ ಸಾಗಿತ್ತು. ಇದೀಗ ಕಾಮಗಾರಿ ಮುಕ್ತಾಯವಾಗಿದ್ದು. ಟ್ಯಾಂಕ್ ಅನ್ನು ಪರೀಕ್ಷಿಸಲು ನೀರು ತುಂಬಿಸಿದಾಗ ನೀರು ಸೋರಿಕೆಯಾಗಿದೆ. ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p>ಕಾಮಗಾರಿಯು ಕಳಪೆಯಿಂದ ಕೂಡಿದ್ದು, ಗುತ್ತಿಗೆದಾರರ ವಿರುಧ್ಧ ಕ್ರಮ ಕೈಗೊಳ್ಳಬೇಕು. ಇದನ್ನು ಗಮನಿಸಬೇಕಾದ ಅಧಿಕಾರಿಗಳು ಸಹ ಕರ್ತವ್ಯ ಲೋಪ ಎಸಗಿದ್ದಾರೆ. ಈ ಕೂಡಲೇ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕು ಎಂದು ಅಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಮೊದಲೇ ಬೇಸಿಗೆ ಬೇಗೆಯಿಂದ ನರಳುತ್ತಿದ್ದೇವೆ. ನೀರಿಗಾಗಿ ಎಲ್ಲೆಡೆ ಹಾಹಾಕಾರ ಪ್ರಾರಂಭವಾಗಿದೆ. ಹೀಗಿರುವಾಗ ಇಲ್ಲಿನ ಟ್ಯಾಂಕ್ ಸಂಪೂರ್ಣವಾಗಿ ಸೋರುತ್ತಿದೆ. ಆದರೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷದಿಂದ ಹತ್ತಾರು ವರುಷ ಜನರಿಗೆ ಕುಡಿಯುವ ನೀರು ಒದಗಿಸುವ ಟ್ಯಾಂಕ್ ಉದ್ಘಾಟನೆಗೂ ಮುನ್ನ ಸೋರುತ್ತಿದೆ.</p>.<p>ಇದೀಗ ಯಾವುದೋ ಒಂದು ರಾಸಾಯನಿಕ ಬಳಸಿ ಅದನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಈ ಕೂಡಲೇ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>