<p><strong>ಕನಕಪುರ</strong>: ಹಿಂದುತ್ವ ಪರ ಸಂಘಟನೆಗಳು, ರಾಷ್ಟ್ರೀಯ ಸ್ವಯಂ ಸೇವಕ ಕಾರ್ಯಕರ್ತರು ಆಯೋಜಿಸಿದ್ದ ತಾಲ್ಲೂಕು ಮಟ್ಟದ ಹಿಂದೂ ಸಮಾಜೋತ್ಸವ ಸೋಮವಾರ ನಗರದಲ್ಲಿ ನಡೆಯಿತು.</p>.<p>ನಗರದ ಅಯ್ಯಪ್ಪ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ಆರಂಭವಾಯಿತು. ದೇಶದ ಮಹಾನ್ ನಾಯಕರ ಸ್ಥಬ್ದ ಚಿತ್ರ ಹಾಗೂ ಶಕ್ತಿ ದೇವತೆಗಳ ಮುತ್ತಿನ ಪಲ್ಲಕ್ಕಿ ಮೆರವಣಿಗೆ ನಗರದ ಎಂ.ಜಿ. ರಸ್ತೆಯಲ್ಲಿ ಸಾಗಿತು.</p>.<p>ಮೆರವಣಿಗೆ ತಾಲ್ಲೂಕು ಕ್ರೀಡಾಂಗಣದ ವೇದಿಕೆ ತಲುಪುತ್ತಿದ್ದಂತೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮ ಪ್ರಾರಂಭಿಸಲಾಯಿತು.</p>.<p>ರಾಮಕೃಷ್ಣಾಶ್ರಮದ ನಾರಾಯಣ ಸರಸ್ವತಿ, ಚಿಕ್ಕಕಲ್ಬಾಳ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಕನಕಪುರದ ಜೋಷ್ ಮಯಿ, ಉತ್ಕರ್ಷ ಮಾತನಾಡಿದರು.</p>.<p>ಮಹಾನ್ ಸಾಧುಸಂತರನ್ನು ಮಹನೀಯರನ್ನು, ಪುಣ್ಯ ಪುರುಷರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಅವರನ್ನು ಜಾತಿಯ ಬಂಧನದಿಂದ ಮುಕ್ತಗೊಳಿಸಬೇಕು, ಸ್ವಾರ್ಥಕ್ಕೆ ಬಳಸಿಕೊಳ್ಳುವುದನ್ನು ಬಿಡಬೇಕು. ಹಿಂದೂ ಸಮಾಜದ ಉಳಿವಿಗೆ ಎಲ್ಲರೂ ಒಟ್ಟಾಗಬೇಕೆಂದು ಹೇಳಿದರು.</p>.<p>ಹಿಂದೂ ಸಮಾಜೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಬಿ. ನಾಗರಾಜು ಸೇರಿದಂತೆ ಸಮಿತಿ ಸದಸ್ಯರು ,ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಹಿಂದುತ್ವ ಪರ ಸಂಘಟನೆಗಳು, ರಾಷ್ಟ್ರೀಯ ಸ್ವಯಂ ಸೇವಕ ಕಾರ್ಯಕರ್ತರು ಆಯೋಜಿಸಿದ್ದ ತಾಲ್ಲೂಕು ಮಟ್ಟದ ಹಿಂದೂ ಸಮಾಜೋತ್ಸವ ಸೋಮವಾರ ನಗರದಲ್ಲಿ ನಡೆಯಿತು.</p>.<p>ನಗರದ ಅಯ್ಯಪ್ಪ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ಆರಂಭವಾಯಿತು. ದೇಶದ ಮಹಾನ್ ನಾಯಕರ ಸ್ಥಬ್ದ ಚಿತ್ರ ಹಾಗೂ ಶಕ್ತಿ ದೇವತೆಗಳ ಮುತ್ತಿನ ಪಲ್ಲಕ್ಕಿ ಮೆರವಣಿಗೆ ನಗರದ ಎಂ.ಜಿ. ರಸ್ತೆಯಲ್ಲಿ ಸಾಗಿತು.</p>.<p>ಮೆರವಣಿಗೆ ತಾಲ್ಲೂಕು ಕ್ರೀಡಾಂಗಣದ ವೇದಿಕೆ ತಲುಪುತ್ತಿದ್ದಂತೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮ ಪ್ರಾರಂಭಿಸಲಾಯಿತು.</p>.<p>ರಾಮಕೃಷ್ಣಾಶ್ರಮದ ನಾರಾಯಣ ಸರಸ್ವತಿ, ಚಿಕ್ಕಕಲ್ಬಾಳ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಕನಕಪುರದ ಜೋಷ್ ಮಯಿ, ಉತ್ಕರ್ಷ ಮಾತನಾಡಿದರು.</p>.<p>ಮಹಾನ್ ಸಾಧುಸಂತರನ್ನು ಮಹನೀಯರನ್ನು, ಪುಣ್ಯ ಪುರುಷರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಅವರನ್ನು ಜಾತಿಯ ಬಂಧನದಿಂದ ಮುಕ್ತಗೊಳಿಸಬೇಕು, ಸ್ವಾರ್ಥಕ್ಕೆ ಬಳಸಿಕೊಳ್ಳುವುದನ್ನು ಬಿಡಬೇಕು. ಹಿಂದೂ ಸಮಾಜದ ಉಳಿವಿಗೆ ಎಲ್ಲರೂ ಒಟ್ಟಾಗಬೇಕೆಂದು ಹೇಳಿದರು.</p>.<p>ಹಿಂದೂ ಸಮಾಜೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಬಿ. ನಾಗರಾಜು ಸೇರಿದಂತೆ ಸಮಿತಿ ಸದಸ್ಯರು ,ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>