<p><strong>ಕನಕಪುರ: </strong>ಪಟ್ಟಣದ ಮೇಗಳಬೀದಿಯಲ್ಲಿ 90 ವರ್ಷದ ವೃದ್ಧ ಕೋವಿಡ್ಗೆ ಬಲಿಯಾಗಿದ್ದಾರೆ. ತಾಲ್ಲೂಕಿನಲ್ಲಿ 4 ಮಂದಿ ಕೊರೊನಾ ಸೋಂಕಿತರಿದ್ದು, ಇವರಲ್ಲಿ ಸೋಂಕಿನಿಂದ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ.<br /><br />ಬಾಣಂತಮಾರಮ್ಮ ಬಡಾವಣೆ ಹತ್ತಿರದ ಪುಟ್ಟಶೆಟ್ಟಿ ಬೀದಿ ಮತ್ತು ಸಿಂಗ್ರಿಶೆಟ್ಟಿ ಬೀದಿಯನ್ನು 28 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ.ಸೀಲ್ಡೌನ್ ಪ್ರದೇಶದಲ್ಲಿ 61 ಮನೆಗಳಿದ್ದು 220 ಮಂದಿ ಇದ್ದಾರೆ.ಇಷ್ಟು ಕುಟುಂಬಗಳಿಗೆ ನಗರಸಭೆ ವತಿಯಿಂದ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.</p>.<p>ಇದರ ಜತೆಗೆ ಮೃತಪಟ್ಟವರಿಗೆ ಸೇರಿದ್ದ ಬೂದಿಕೇರಿಯಲ್ಲಿದ್ದ ಅಂಗಡಿಯನ್ನು 28 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೃತ ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಿ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸಲಾಗಿದೆ.</p>.<p><strong>ಮತ್ತೊಂದು ಪ್ರಕರಣ ದೃಢ:</strong>ತಾಲ್ಲೂಕಿನ ಮರಳವಾಡಿ ಹೋಬಳಿ ದೊಡ್ಡಸಾದೇನಹಳ್ಳಿ ಗ್ರಾಮದಲ್ಲಿ 60 ವರ್ಷದ ವೃದ್ಧರೊಬ್ಬರಿಗೆ ಕೋವಿಡ್ ಇರುವುದು ಬುಧವಾರ ದೃಢಪಟ್ಟಿದೆ.<br />ಇವರು ಕಿಡ್ನಿ ವೈಪಲ್ಯದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸುತ್ತಿದ್ದರು. ಅವರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಕೊರೊನಾ ಪರೀಕ್ಷೆಮಾಡಲಾಗಿತ್ತು.ಅದರಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದಾಗಿ ತಾಲ್ಲೂಕು ಆರೋಗ್ಯ ಇಲಾಖೆ ಖಚಿತಪಡಿಸಿದೆ.</p>.<p>ಬುಧವಾರ ಸಂಜೆ ವೇಳೆಗೆ ದೊಡ್ಡಸಾದೇನಹಳ್ಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಸೋಂಕಿತರನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ.ಗ್ರಾಮದ ಒಂದು ಬೀದಿಯನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ.<br /><br />ಕೊರೊನಾ ಬಂದಿರುವುದರಿಂದ ಗ್ರಾಮದ ಜನರಲ್ಲಿ ಆತಂಕ ಸೃಷ್ಠಿಯಾಗಿದ್ದು, ರೈತರಿಂದ ಹಾಲು ಖರೀದಿಸಿದ್ದ ಹಾಲಿನ ಡೇರಿ ಎಲ್ಲಾ ಹಾಲನ್ನು ಚರಂಡಿಗೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಪಟ್ಟಣದ ಮೇಗಳಬೀದಿಯಲ್ಲಿ 90 ವರ್ಷದ ವೃದ್ಧ ಕೋವಿಡ್ಗೆ ಬಲಿಯಾಗಿದ್ದಾರೆ. ತಾಲ್ಲೂಕಿನಲ್ಲಿ 4 ಮಂದಿ ಕೊರೊನಾ ಸೋಂಕಿತರಿದ್ದು, ಇವರಲ್ಲಿ ಸೋಂಕಿನಿಂದ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ.<br /><br />ಬಾಣಂತಮಾರಮ್ಮ ಬಡಾವಣೆ ಹತ್ತಿರದ ಪುಟ್ಟಶೆಟ್ಟಿ ಬೀದಿ ಮತ್ತು ಸಿಂಗ್ರಿಶೆಟ್ಟಿ ಬೀದಿಯನ್ನು 28 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ.ಸೀಲ್ಡೌನ್ ಪ್ರದೇಶದಲ್ಲಿ 61 ಮನೆಗಳಿದ್ದು 220 ಮಂದಿ ಇದ್ದಾರೆ.ಇಷ್ಟು ಕುಟುಂಬಗಳಿಗೆ ನಗರಸಭೆ ವತಿಯಿಂದ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.</p>.<p>ಇದರ ಜತೆಗೆ ಮೃತಪಟ್ಟವರಿಗೆ ಸೇರಿದ್ದ ಬೂದಿಕೇರಿಯಲ್ಲಿದ್ದ ಅಂಗಡಿಯನ್ನು 28 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೃತ ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಿ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸಲಾಗಿದೆ.</p>.<p><strong>ಮತ್ತೊಂದು ಪ್ರಕರಣ ದೃಢ:</strong>ತಾಲ್ಲೂಕಿನ ಮರಳವಾಡಿ ಹೋಬಳಿ ದೊಡ್ಡಸಾದೇನಹಳ್ಳಿ ಗ್ರಾಮದಲ್ಲಿ 60 ವರ್ಷದ ವೃದ್ಧರೊಬ್ಬರಿಗೆ ಕೋವಿಡ್ ಇರುವುದು ಬುಧವಾರ ದೃಢಪಟ್ಟಿದೆ.<br />ಇವರು ಕಿಡ್ನಿ ವೈಪಲ್ಯದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸುತ್ತಿದ್ದರು. ಅವರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಕೊರೊನಾ ಪರೀಕ್ಷೆಮಾಡಲಾಗಿತ್ತು.ಅದರಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದಾಗಿ ತಾಲ್ಲೂಕು ಆರೋಗ್ಯ ಇಲಾಖೆ ಖಚಿತಪಡಿಸಿದೆ.</p>.<p>ಬುಧವಾರ ಸಂಜೆ ವೇಳೆಗೆ ದೊಡ್ಡಸಾದೇನಹಳ್ಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಸೋಂಕಿತರನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ.ಗ್ರಾಮದ ಒಂದು ಬೀದಿಯನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ.<br /><br />ಕೊರೊನಾ ಬಂದಿರುವುದರಿಂದ ಗ್ರಾಮದ ಜನರಲ್ಲಿ ಆತಂಕ ಸೃಷ್ಠಿಯಾಗಿದ್ದು, ರೈತರಿಂದ ಹಾಲು ಖರೀದಿಸಿದ್ದ ಹಾಲಿನ ಡೇರಿ ಎಲ್ಲಾ ಹಾಲನ್ನು ಚರಂಡಿಗೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>