<p><strong>ಕನಕಪುರ</strong>: ತಾಲ್ಲೂಕು ಕಚೇರಿ ತಹಶೀಲ್ದಾರ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಸ ಜಯಂತಿಗೆ ಅಧಿಕಾರಿಗಳು ಗೈರು ಹಾಜರಿಯಾಗಿದ್ದನ್ನು ವಿವಿಧ ಸಂಘಟನೆಗಳ ಮುಖಂಡರು ಖಂಡಿಸಿದ್ದಾರೆ. </p>.<p>ಅಧಿಕಾರಿಗಳು ಗೈರು ಹಾಜರಾಗುವ ಮೂಲಕ ನಿರ್ಲಕ್ಷ್ಯ ತೋರಿದ್ದಾರೆ.ಈ ಧೋರಣೆ ಬದಲಾಗಬೇಕು ಎಂದು ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.</p>.<p>ಸರ್ಕಾರ ಆಚರಣೆ ಮಾಡುವ ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಪೂರ್ವಭಾವಿಸಭೆ ನಡೆಸುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಸರ್ಕಾರದ ಕಾರ್ಯಕ್ರಮಕ್ಕೆ ಅಧಿಕಾರಿಗಳೇ ಸಹಕಾರ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸರ್ಕಾರ ಹಮ್ಮಿಕೊಳ್ಳುವ ಜಯಂತಿ, ಕಾರ್ಯಕ್ರಮಗಳಿಗೆ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಬೇಜವಾಬ್ದಾರಿ ವರ್ತನಗೆ ಕಾರಣ ಎಂದರು.</p>.<p>ಮುಂದಿನ ದಿನಗಳಲ್ಲಿ ನಡೆಯುವ ಜಯಂತಿ, ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಸಂಬಂಧಪಟ್ಟ ಸಮುದಾಯದವರಿಗೆ, ಸಂಘಟನೆಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು. </p>.<p>ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲೂ ಪ್ರತಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಳ್ಳುವಂತೆ ಮುಂಚಿತವಾಗಿ ನೊಟೀಸ್ ನೀಡಿರುತ್ತೇವೆ. ಮುಂದೆ ಕಡ್ಡಾಯವಾಗಿ ಎಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಲಾಗುವುದು ಎಂದು ಗ್ರೇಡ್ -2 ತಹಶೀಲ್ದಾರ್ ಶಿವಕುಮಾರ್ ಭರವಸೆ ನೀಡಿದರು.<br /><br /> ಸಾಹಿತಿಗಳಾದ ಎಲ್ಲೇಗೌಡ ಬೆಸಗರಹಳ್ಳಿ, ಕೂ.ಗಿ.ಗಿರಿಯಪ್ಪ, ಎ.ಪಿ.ಕೃಷ್ಣಪ್ಪ,ಸಂಘಟನೆಗಳ ಮುಖಂಡರಾದ ಕುಮಾರ ಸ್ವಾಮಿ, ಮಲ್ಲಿಕಾರ್ಜುನ್, ಆನಂದ್ ಪೈ, ವೀರೇಶ್ ಮುಂತಾದವರು ಬಸವಣ್ಣನವರ ಆಚಾರ, ವಿಚಾರಗಳ ಬಗ್ಗೆ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ತಾಲ್ಲೂಕು ಕಚೇರಿ ತಹಶೀಲ್ದಾರ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಸ ಜಯಂತಿಗೆ ಅಧಿಕಾರಿಗಳು ಗೈರು ಹಾಜರಿಯಾಗಿದ್ದನ್ನು ವಿವಿಧ ಸಂಘಟನೆಗಳ ಮುಖಂಡರು ಖಂಡಿಸಿದ್ದಾರೆ. </p>.<p>ಅಧಿಕಾರಿಗಳು ಗೈರು ಹಾಜರಾಗುವ ಮೂಲಕ ನಿರ್ಲಕ್ಷ್ಯ ತೋರಿದ್ದಾರೆ.ಈ ಧೋರಣೆ ಬದಲಾಗಬೇಕು ಎಂದು ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.</p>.<p>ಸರ್ಕಾರ ಆಚರಣೆ ಮಾಡುವ ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಪೂರ್ವಭಾವಿಸಭೆ ನಡೆಸುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಸರ್ಕಾರದ ಕಾರ್ಯಕ್ರಮಕ್ಕೆ ಅಧಿಕಾರಿಗಳೇ ಸಹಕಾರ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸರ್ಕಾರ ಹಮ್ಮಿಕೊಳ್ಳುವ ಜಯಂತಿ, ಕಾರ್ಯಕ್ರಮಗಳಿಗೆ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಬೇಜವಾಬ್ದಾರಿ ವರ್ತನಗೆ ಕಾರಣ ಎಂದರು.</p>.<p>ಮುಂದಿನ ದಿನಗಳಲ್ಲಿ ನಡೆಯುವ ಜಯಂತಿ, ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಸಂಬಂಧಪಟ್ಟ ಸಮುದಾಯದವರಿಗೆ, ಸಂಘಟನೆಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು. </p>.<p>ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲೂ ಪ್ರತಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಳ್ಳುವಂತೆ ಮುಂಚಿತವಾಗಿ ನೊಟೀಸ್ ನೀಡಿರುತ್ತೇವೆ. ಮುಂದೆ ಕಡ್ಡಾಯವಾಗಿ ಎಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಲಾಗುವುದು ಎಂದು ಗ್ರೇಡ್ -2 ತಹಶೀಲ್ದಾರ್ ಶಿವಕುಮಾರ್ ಭರವಸೆ ನೀಡಿದರು.<br /><br /> ಸಾಹಿತಿಗಳಾದ ಎಲ್ಲೇಗೌಡ ಬೆಸಗರಹಳ್ಳಿ, ಕೂ.ಗಿ.ಗಿರಿಯಪ್ಪ, ಎ.ಪಿ.ಕೃಷ್ಣಪ್ಪ,ಸಂಘಟನೆಗಳ ಮುಖಂಡರಾದ ಕುಮಾರ ಸ್ವಾಮಿ, ಮಲ್ಲಿಕಾರ್ಜುನ್, ಆನಂದ್ ಪೈ, ವೀರೇಶ್ ಮುಂತಾದವರು ಬಸವಣ್ಣನವರ ಆಚಾರ, ವಿಚಾರಗಳ ಬಗ್ಗೆ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>