<p><strong>ಕನಕಪುರ</strong>: ಚಿಂತನೆ ಮನುಷ್ಯನ ಜೀವನ ನಕಾರಾತ್ಮಕತೆಯೆಡೆಗೆ ಕೊಂಡೊಯ್ಯುತ್ತದೆ. ಶರಣರ ಹಿತವಚನ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಯಶಸ್ಸಿನಡೆಗೆ ಕೊಂಡೊಯ್ಯುತ್ತದೆ ಎಂದು ದಾಳಿಂಬ ಬಸವ ಗುರು ಮಂಟಪ ಅಧ್ಯಕ್ಷ ಹಾಗೂ ಕುಂಬಳಗೂಡು ಬಸವ ಗಂಗೋತ್ರಿ ಡಾ.ಚನ್ನಬಸವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಸಾತನೂರು ಹೋಬಳಿ ದಾಳಿಂಬ ಗ್ರಾಮದ ಗುರು ಬಸವ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶರಣರ ಸಂಗಮ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.</p>.<p>ನಮ್ಮ ಅಹಂಕಾರ ನಿವಾರಣೆಯಾಗಲು ಶರಣರು ನೀಡಿದ ಮಹಾ ಆದರ್ಶ ನಮ್ಮ ಬಾಳಿನಲ್ಲಿ ಅಳವಡಿಸಿಕೊಳ್ಳಬೇಕು. ಯುವಕರು, ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದರು.</p>.<p>‘ಮಾನವನ ಜೀವನ ಯಶಸ್ವಿಯಾಗಲು ಶರಣರ ಚಿಂತನೆ ಅಗತ್ಯ. ಜಗಜ್ಯೋತಿ ಬಸವಣ್ಣ ಅವರು ನೀಡಿದ ವಚನ ಸಾರ ಎಲ್ಲರೂ ಅಳವಡಿಸಿಕೊಳ್ಳಬೇಕಿದೆ’ ಎಂದು ತಿಳಿಸಿದರು.</p>.<p>ಸಾಮೂಹಿಕ ಪ್ರಾರ್ಥನೆ ಮಾಡುವುದರಿಂದ ಭಕ್ತರ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬೆಳೆಯಲು ಕಾರಣವಾಗುತ್ತದೆ. ದಾಳಿಂಬ ಬಸವ ಮಂಟಪದಲ್ಲಿ ಪ್ರತಿ ತಿಂಗಳು ಬಸವ ಸ್ಮರಣೆ ಕಾರ್ಯಕ್ರಮ ಇರುತ್ತದೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದರು.</p>.<p>ಮುದ್ದು ಬಸಪ್ಪ, ಈರಮ್ಮ, ಶಿವಲಿಂಗಯ್ಯ, ಉದ್ಯಮಿ ಮುನಿಮಾದಪ್ಪ, ಯೋಗ ಗುರು ವೆಂಕಟೇಶ್, ಬಸವ ಸಮಿತಿ ತಾಲ್ಲೂಕು ಅಧ್ಯಕ್ಷ ನಿರಂಜನ್ ಮೂರ್ತಿ, ಬಿಡದಿ ರೇಣುಕಪ್ಪ, ಚನ್ನಬಸವಣ್ಣ, ಮಂಜಮ್ಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಚಿಂತನೆ ಮನುಷ್ಯನ ಜೀವನ ನಕಾರಾತ್ಮಕತೆಯೆಡೆಗೆ ಕೊಂಡೊಯ್ಯುತ್ತದೆ. ಶರಣರ ಹಿತವಚನ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಯಶಸ್ಸಿನಡೆಗೆ ಕೊಂಡೊಯ್ಯುತ್ತದೆ ಎಂದು ದಾಳಿಂಬ ಬಸವ ಗುರು ಮಂಟಪ ಅಧ್ಯಕ್ಷ ಹಾಗೂ ಕುಂಬಳಗೂಡು ಬಸವ ಗಂಗೋತ್ರಿ ಡಾ.ಚನ್ನಬಸವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಸಾತನೂರು ಹೋಬಳಿ ದಾಳಿಂಬ ಗ್ರಾಮದ ಗುರು ಬಸವ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶರಣರ ಸಂಗಮ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.</p>.<p>ನಮ್ಮ ಅಹಂಕಾರ ನಿವಾರಣೆಯಾಗಲು ಶರಣರು ನೀಡಿದ ಮಹಾ ಆದರ್ಶ ನಮ್ಮ ಬಾಳಿನಲ್ಲಿ ಅಳವಡಿಸಿಕೊಳ್ಳಬೇಕು. ಯುವಕರು, ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದರು.</p>.<p>‘ಮಾನವನ ಜೀವನ ಯಶಸ್ವಿಯಾಗಲು ಶರಣರ ಚಿಂತನೆ ಅಗತ್ಯ. ಜಗಜ್ಯೋತಿ ಬಸವಣ್ಣ ಅವರು ನೀಡಿದ ವಚನ ಸಾರ ಎಲ್ಲರೂ ಅಳವಡಿಸಿಕೊಳ್ಳಬೇಕಿದೆ’ ಎಂದು ತಿಳಿಸಿದರು.</p>.<p>ಸಾಮೂಹಿಕ ಪ್ರಾರ್ಥನೆ ಮಾಡುವುದರಿಂದ ಭಕ್ತರ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬೆಳೆಯಲು ಕಾರಣವಾಗುತ್ತದೆ. ದಾಳಿಂಬ ಬಸವ ಮಂಟಪದಲ್ಲಿ ಪ್ರತಿ ತಿಂಗಳು ಬಸವ ಸ್ಮರಣೆ ಕಾರ್ಯಕ್ರಮ ಇರುತ್ತದೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದರು.</p>.<p>ಮುದ್ದು ಬಸಪ್ಪ, ಈರಮ್ಮ, ಶಿವಲಿಂಗಯ್ಯ, ಉದ್ಯಮಿ ಮುನಿಮಾದಪ್ಪ, ಯೋಗ ಗುರು ವೆಂಕಟೇಶ್, ಬಸವ ಸಮಿತಿ ತಾಲ್ಲೂಕು ಅಧ್ಯಕ್ಷ ನಿರಂಜನ್ ಮೂರ್ತಿ, ಬಿಡದಿ ರೇಣುಕಪ್ಪ, ಚನ್ನಬಸವಣ್ಣ, ಮಂಜಮ್ಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>