<p>ಪ್ರಜಾವಾಣಿ ವಾರ್ತೆ</p>.<p>ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಸಂಬಾಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ರಾಡ್ನಿಂದ ಹಲ್ಲೆ ಮಾಡಿರುವ ಪ್ರಕರಣ ತಡವಾಗಿ ಗೊತ್ತಾಗಿದೆ.</p>.<p>ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಿರಣ (25) ಹಲ್ಲೆಗೊಳಗಾಗಿ ಗಾಯಗೊಂಡ ಕೂಲಿ ಕಾರ್ಮಿಕ. ಇದೇ ತಾಲ್ಲೂಕಿನ ಗೋವಿಂದಪ್ಪ ಹಲ್ಲೆ ಮಾಡಿದ ಆರೋಪಿ.</p>.<p>ಜಲಜೀವನ್ ಮಿಷನ್ ಕಾಮಗಾರಿ ಕೆಲಸಕ್ಕಾಗಿ ತುಮಕೂರಿನ ಕೂಲಿ ಕಾರ್ಮಿಕ ಕುಟುಂಬಗಳು ಸಾತನೂರು ಹೋಬಳಿ ಸಂಬಾಪುರ ವಾಸ ಇವೆ.</p>.<p>ಕಳೆದ ಮೇ 16 ರಂದು ಆರೋಪಿ ಗೋವಿಂದಪ್ಪ ಕಿರಣ ಅವರ ಕಾಲಿಗೆ ಕಬ್ಬಿಣದ ರಾಡ್ನಿಂದ ಹೊಡೆದಿದ್ದರಿಂದ ಕಾಲಿನ ಮೂಳೆ ಮುರಿದಿತ್ತು.</p>.<p>ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಗಾಯಾಳು ಕಿರಣ್ ತಾಯಿ ಎಲ್ಲಮ್ಮ ಜೂನ್ 5 ರಂದು ಸಾತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಸಂಬಾಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ರಾಡ್ನಿಂದ ಹಲ್ಲೆ ಮಾಡಿರುವ ಪ್ರಕರಣ ತಡವಾಗಿ ಗೊತ್ತಾಗಿದೆ.</p>.<p>ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಿರಣ (25) ಹಲ್ಲೆಗೊಳಗಾಗಿ ಗಾಯಗೊಂಡ ಕೂಲಿ ಕಾರ್ಮಿಕ. ಇದೇ ತಾಲ್ಲೂಕಿನ ಗೋವಿಂದಪ್ಪ ಹಲ್ಲೆ ಮಾಡಿದ ಆರೋಪಿ.</p>.<p>ಜಲಜೀವನ್ ಮಿಷನ್ ಕಾಮಗಾರಿ ಕೆಲಸಕ್ಕಾಗಿ ತುಮಕೂರಿನ ಕೂಲಿ ಕಾರ್ಮಿಕ ಕುಟುಂಬಗಳು ಸಾತನೂರು ಹೋಬಳಿ ಸಂಬಾಪುರ ವಾಸ ಇವೆ.</p>.<p>ಕಳೆದ ಮೇ 16 ರಂದು ಆರೋಪಿ ಗೋವಿಂದಪ್ಪ ಕಿರಣ ಅವರ ಕಾಲಿಗೆ ಕಬ್ಬಿಣದ ರಾಡ್ನಿಂದ ಹೊಡೆದಿದ್ದರಿಂದ ಕಾಲಿನ ಮೂಳೆ ಮುರಿದಿತ್ತು.</p>.<p>ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಗಾಯಾಳು ಕಿರಣ್ ತಾಯಿ ಎಲ್ಲಮ್ಮ ಜೂನ್ 5 ರಂದು ಸಾತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>