<p>ಕನಕಪುರ: ‘ನಿಖಿಲ್ ಕುಮಾರಸ್ವಾಮಿ ಅವರ ಸ್ಟೇಟಸ್ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ’ ಎಂದು ಹಾರೋಹಳ್ಳಿ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಕೆ.ಎನ್.ರಾಮು ಪ್ರತಿಕ್ರಿಯಿಸಿದ್ದಾರೆ.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ನಿಖಿಲ್ ಅವರು ಚಿಕ್ಕವಯಸ್ಸಿನಲ್ಲೇ ಪಕ್ಷದ ಜವಾಬ್ದಾರಿ ಹೊತ್ತು ರಾಜ್ಯದಾದ್ಯಂತ ಸಂಘಟನೆ ಮಾಡುತ್ತಿದ್ದಾರೆ. ಇದನ್ನು ಸಹಿಸದೇ ವ್ಯಂಗ್ಯವಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ಒಂದು ಕಾಲದಲ್ಲಿ ನೀವೂ ನಿಖಿಲ್ ಅವರಂತೆಯೇ ಕಾಂಗ್ರೆಸ್ನಲ್ಲಿ ಆ ಹಂತದಲ್ಲಿ ಕೆಲಸ ಮಾಡಿದ್ದೀರಿ. ಆಗ ನಿಮ್ಮ ಸ್ಟೇಟಸ್ ಏನಾಗಿತ್ತು ಎಂಬುದನ್ನು ರಾಜ್ಯದ ಜನರಿಗೆ ನೀವೇ ತಿಳಿಸಬೇಕು. ಬೇರೆಯವರ ಬಗ್ಗೆ, ಇತರ ಪಕ್ಷಗಳ ಮುಖಂಡರ ಬಗ್ಗೆ ವ್ಯಂಗ್ಯವಾಗಿ ಮಾತನಾಡುವುದನ್ನು ಬಿಡಬೇಕು’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-14-1833669555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ‘ನಿಖಿಲ್ ಕುಮಾರಸ್ವಾಮಿ ಅವರ ಸ್ಟೇಟಸ್ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ’ ಎಂದು ಹಾರೋಹಳ್ಳಿ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಕೆ.ಎನ್.ರಾಮು ಪ್ರತಿಕ್ರಿಯಿಸಿದ್ದಾರೆ.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ನಿಖಿಲ್ ಅವರು ಚಿಕ್ಕವಯಸ್ಸಿನಲ್ಲೇ ಪಕ್ಷದ ಜವಾಬ್ದಾರಿ ಹೊತ್ತು ರಾಜ್ಯದಾದ್ಯಂತ ಸಂಘಟನೆ ಮಾಡುತ್ತಿದ್ದಾರೆ. ಇದನ್ನು ಸಹಿಸದೇ ವ್ಯಂಗ್ಯವಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ಒಂದು ಕಾಲದಲ್ಲಿ ನೀವೂ ನಿಖಿಲ್ ಅವರಂತೆಯೇ ಕಾಂಗ್ರೆಸ್ನಲ್ಲಿ ಆ ಹಂತದಲ್ಲಿ ಕೆಲಸ ಮಾಡಿದ್ದೀರಿ. ಆಗ ನಿಮ್ಮ ಸ್ಟೇಟಸ್ ಏನಾಗಿತ್ತು ಎಂಬುದನ್ನು ರಾಜ್ಯದ ಜನರಿಗೆ ನೀವೇ ತಿಳಿಸಬೇಕು. ಬೇರೆಯವರ ಬಗ್ಗೆ, ಇತರ ಪಕ್ಷಗಳ ಮುಖಂಡರ ಬಗ್ಗೆ ವ್ಯಂಗ್ಯವಾಗಿ ಮಾತನಾಡುವುದನ್ನು ಬಿಡಬೇಕು’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-14-1833669555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>