<p>ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಮುಗ್ಗೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ಗೊನೆ ಬಿಟ್ಟಿದ್ದ ಬಾಳೆ ಗಿಡ ಹಾಗೂ ಕೃಷಿ ಪಂಪ್ ಸೆಟ್ನ ಪೈಪ್ಗಳನ್ನು ನಾಶಗೊಳಿಸಿವೆ.</p>.<p>ಮುಗ್ಗೂರು ಗ್ರಾಮದಲ್ಲಿ ಸುಮಾರು 20 ರೈತರು ಬಾಳೆ ಬೇಸಾಯ ಮಾಡಿದ್ದಾರೆ. ಒಂದು ತಿಂಗಳಿಂದ ಆನೆಗಳು ಹಿಂಡು ಗ್ರಾಮಕ್ಕೆ ನುಗ್ಗಿ ಬಾಳೆಗಿಡಗಳನ್ನು ನಾಶಗೊಳಿಸುತ್ತಿವೆ. ಶುಕ್ರವಾರ ರಾತ್ರಿ ಆನೆಗಳು ಬಾಳೆ ತೋಟಕ್ಕೆ ನುಗ್ಗಿ ದಾಂದಲೆ ಮಾಡಿವೆ.</p>.<p>ಕಾಡಾನೆಗಳು ಅರಣ್ಯದಿಂದ ಆಚೆ ಬರದಂತೆ ಸೋಲಾರ್ ತಂತಿ ಬೇಲಿ, ಆನೆ ಕಂದಕ ಮತ್ತು ರೈಲ್ವೆ ಕಂಬಿ ಅಳವಡಿಸಲಾಗಿದೆ. ಗ್ರಾಮಕ್ಕೆ ವಾಹನ ಮತ್ತು ಜನ ಓಡಾಡಲು ಗೇಟ್ ಅಳವಡಿಸಲಾಗಿದೆ. ರಾತ್ರಿ ಈ ಗೇಟ್ ಮೂಲಕವೇ ಆನೆಗಳು ಗ್ರಾಮಕ್ಕೆ ನುಗ್ಗುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.</p>.<p>ಅರಣ್ಯ ಸಿಬ್ಬಂದಿ ಶನಿವಾರ ಬೆಳಿಗ್ಗೆ ಬಾಳೆ ನಾಶವಾಗಿರುವ ತೋಟಗಳಿಗೆ ಭೇಟಿ ನೀಡಿದರು. ಗ್ರಾಮಸ್ಥರು, ‘ಹಿರಿಯ ಅಧಿಕಾರಿಗಳು ಬರಬೇಕು. ನೀವು ಜಿಪಿಎಸ್ ಮಾಡಬೇಡಿ’ ಎಂದು ತಡೆದರು.</p>.<p>ರೈತರ ವಿರೋಧದಿಂದ ಎಚ್ಚೆತ್ತ ಅರಣ್ಯ ಇಲಾಖೆ ಆರ್ಎಫ್ಒ, ಡಿಆರ್ಎಫ್ಒ ಗ್ರಾಮಕ್ಕೆ ಭೇಟಿ ನೀಡಿ ರೈತರನ್ನು ಸಮಾಧಾನಪಡಿಸಿ ಆನೆಗಳು ಬರದಂತೆ ತಡೆಗಟ್ಟಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-14-1734531832</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಮುಗ್ಗೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ಗೊನೆ ಬಿಟ್ಟಿದ್ದ ಬಾಳೆ ಗಿಡ ಹಾಗೂ ಕೃಷಿ ಪಂಪ್ ಸೆಟ್ನ ಪೈಪ್ಗಳನ್ನು ನಾಶಗೊಳಿಸಿವೆ.</p>.<p>ಮುಗ್ಗೂರು ಗ್ರಾಮದಲ್ಲಿ ಸುಮಾರು 20 ರೈತರು ಬಾಳೆ ಬೇಸಾಯ ಮಾಡಿದ್ದಾರೆ. ಒಂದು ತಿಂಗಳಿಂದ ಆನೆಗಳು ಹಿಂಡು ಗ್ರಾಮಕ್ಕೆ ನುಗ್ಗಿ ಬಾಳೆಗಿಡಗಳನ್ನು ನಾಶಗೊಳಿಸುತ್ತಿವೆ. ಶುಕ್ರವಾರ ರಾತ್ರಿ ಆನೆಗಳು ಬಾಳೆ ತೋಟಕ್ಕೆ ನುಗ್ಗಿ ದಾಂದಲೆ ಮಾಡಿವೆ.</p>.<p>ಕಾಡಾನೆಗಳು ಅರಣ್ಯದಿಂದ ಆಚೆ ಬರದಂತೆ ಸೋಲಾರ್ ತಂತಿ ಬೇಲಿ, ಆನೆ ಕಂದಕ ಮತ್ತು ರೈಲ್ವೆ ಕಂಬಿ ಅಳವಡಿಸಲಾಗಿದೆ. ಗ್ರಾಮಕ್ಕೆ ವಾಹನ ಮತ್ತು ಜನ ಓಡಾಡಲು ಗೇಟ್ ಅಳವಡಿಸಲಾಗಿದೆ. ರಾತ್ರಿ ಈ ಗೇಟ್ ಮೂಲಕವೇ ಆನೆಗಳು ಗ್ರಾಮಕ್ಕೆ ನುಗ್ಗುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.</p>.<p>ಅರಣ್ಯ ಸಿಬ್ಬಂದಿ ಶನಿವಾರ ಬೆಳಿಗ್ಗೆ ಬಾಳೆ ನಾಶವಾಗಿರುವ ತೋಟಗಳಿಗೆ ಭೇಟಿ ನೀಡಿದರು. ಗ್ರಾಮಸ್ಥರು, ‘ಹಿರಿಯ ಅಧಿಕಾರಿಗಳು ಬರಬೇಕು. ನೀವು ಜಿಪಿಎಸ್ ಮಾಡಬೇಡಿ’ ಎಂದು ತಡೆದರು.</p>.<p>ರೈತರ ವಿರೋಧದಿಂದ ಎಚ್ಚೆತ್ತ ಅರಣ್ಯ ಇಲಾಖೆ ಆರ್ಎಫ್ಒ, ಡಿಆರ್ಎಫ್ಒ ಗ್ರಾಮಕ್ಕೆ ಭೇಟಿ ನೀಡಿ ರೈತರನ್ನು ಸಮಾಧಾನಪಡಿಸಿ ಆನೆಗಳು ಬರದಂತೆ ತಡೆಗಟ್ಟಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-14-1734531832</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>