<p><strong>ಕನಕಪುರ</strong>: ಯಡಮಾರನಹಳ್ಳಿ ಕೆಇಬಿ ಸ್ಟೇಷನ್ ಮುಂಭಾಗದ ಸಾತನೂರು ಮುಖ್ಯ ರಸ್ತೆಯ ತಿರುವಿನಲ್ಲಿ ಸೋಮವಾರ ಬೆಳಗ್ಗೆ ಒಂಟಿ ಕಾಡಾನೆಯೊಂದು ಬೈಕ್ ಮೇಲೆ ಹೊರಟಿದ್ದ ಕರ ವಸೂಲಿಗಾರನ ಮೇಲೆ ದಾಳಿ ನಡೆಸಿದೆ.</p>.<p>ಅಚ್ಚಲು ಗ್ರಾಮ ಪಂಚಾಯಿತಿ ಕರ ವಸೂಲಿಗಾರ ರುದ್ರಸ್ವಾಮಿ(50) ಅವರ ತಲೆಗೆ ಆನೆ ಸೊಂಡಿಲಿನಿಂದ ಹೊಡೆದಿದ್ದರಿಂದ ಕೆಳಗೆ ಬಿದ್ದ ಅವರಿಗೆ ತಲೆ ಮತ್ತು ಮುಖಕ್ಕೆ ತೀವ್ರ ಪೆಟ್ಟಾಗಿದೆ. ತಲೆ ಮತ್ತು ಮೂಗು ಬಾಯಿಯಲ್ಲಿ ರಕ್ತ ಸೋರಿದೆ.</p>.<p>ಯಡಮಾರನಹಳ್ಳಿ ಗ್ರಾಮದ ರುದ್ರಸ್ವಾಮಿ ಸೋಮವಾರ ಬೆಳಗ್ಗೆ ಬೈಕಿನಲ್ಲಿ ಸಾತನೂರು ಕಡೆಗೆ ಹೋಗುತ್ತಿದ್ದಾಗ ಮುಖ್ಯ ರಸ್ತೆ ತಿರುವಿನಲ್ಲಿ ಏಕಾಏಕಿ ಆನೆ ದಾಳಿ ನಡೆಸಿದೆ. ಅಚ್ಚಲು ಬೆಟ್ಟದಲ್ಲಿದ್ದ ಆನೆ ಬೆಳಗ್ಗೆ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಹೋಗುವಾಗ ಈ ಘಟನೆ ನಡೆದಿದೆ <br>ಎನ್ನಲಾಗಿದೆ.</p>.<p>ರಸ್ತೆಯಲ್ಲಿ ಹೋಗುತ್ತಿದ್ದವರು ತಕ್ಷಣ ಅವರ ಸಹಾಯಕ್ಕೆ ಹೋಗಿದ್ದಾರೆ. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಯನ್ನು ಕಾಡಿಗೆ ಓಡಿಸಿದರು.</p>.<p>ಗಾಯಾಳು ರುದ್ರಸ್ವಾಮಿ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬೆಂಗಳೂರಿನ ನಿಮ್ಹಾನ್ಸ್ಗೆ ದಾಖಲಿಸಲಾಗಿದೆ.</p>.<p>ಅವರ ಆರೋಗ್ಯ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿರುವುದಾಗಿ ಅರಣ್ಯ ಇಲಾಖೆ ಆರ್ಎಫ್ಒ ಅನಿಲ್ ಕುಮಾರ್ ತಿಳಿಸಿದ್ದಾರೆ. ಎಸಿಎಫ್ ನಾಗೇಂದ್ರ ಪ್ರಸಾದ್ ಅವರು ಘಟನೆ ಕುರಿತು ಮಾಹಿತಿ <br />ಪಡೆದರು. </p>.<p>ವೈಲ್ಡ್ ಲೈಫ್ಎ ಸಿಎಫ್ ನಾಗೇಂದ್ರ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ದಾಳಿ ಮಾಡಿರುವ ಒಂಟಿ ಆನೆಯನ್ನು ಅರಣ್ಯ ಇಲಾಖೆ ನೌಕರರು ಮತ್ತು ಸಿಬ್ಬಂದಿಗಳು ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಯಶಸ್ವಿಯಾಗಿ ಓಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಯಡಮಾರನಹಳ್ಳಿ ಕೆಇಬಿ ಸ್ಟೇಷನ್ ಮುಂಭಾಗದ ಸಾತನೂರು ಮುಖ್ಯ ರಸ್ತೆಯ ತಿರುವಿನಲ್ಲಿ ಸೋಮವಾರ ಬೆಳಗ್ಗೆ ಒಂಟಿ ಕಾಡಾನೆಯೊಂದು ಬೈಕ್ ಮೇಲೆ ಹೊರಟಿದ್ದ ಕರ ವಸೂಲಿಗಾರನ ಮೇಲೆ ದಾಳಿ ನಡೆಸಿದೆ.</p>.<p>ಅಚ್ಚಲು ಗ್ರಾಮ ಪಂಚಾಯಿತಿ ಕರ ವಸೂಲಿಗಾರ ರುದ್ರಸ್ವಾಮಿ(50) ಅವರ ತಲೆಗೆ ಆನೆ ಸೊಂಡಿಲಿನಿಂದ ಹೊಡೆದಿದ್ದರಿಂದ ಕೆಳಗೆ ಬಿದ್ದ ಅವರಿಗೆ ತಲೆ ಮತ್ತು ಮುಖಕ್ಕೆ ತೀವ್ರ ಪೆಟ್ಟಾಗಿದೆ. ತಲೆ ಮತ್ತು ಮೂಗು ಬಾಯಿಯಲ್ಲಿ ರಕ್ತ ಸೋರಿದೆ.</p>.<p>ಯಡಮಾರನಹಳ್ಳಿ ಗ್ರಾಮದ ರುದ್ರಸ್ವಾಮಿ ಸೋಮವಾರ ಬೆಳಗ್ಗೆ ಬೈಕಿನಲ್ಲಿ ಸಾತನೂರು ಕಡೆಗೆ ಹೋಗುತ್ತಿದ್ದಾಗ ಮುಖ್ಯ ರಸ್ತೆ ತಿರುವಿನಲ್ಲಿ ಏಕಾಏಕಿ ಆನೆ ದಾಳಿ ನಡೆಸಿದೆ. ಅಚ್ಚಲು ಬೆಟ್ಟದಲ್ಲಿದ್ದ ಆನೆ ಬೆಳಗ್ಗೆ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಹೋಗುವಾಗ ಈ ಘಟನೆ ನಡೆದಿದೆ <br>ಎನ್ನಲಾಗಿದೆ.</p>.<p>ರಸ್ತೆಯಲ್ಲಿ ಹೋಗುತ್ತಿದ್ದವರು ತಕ್ಷಣ ಅವರ ಸಹಾಯಕ್ಕೆ ಹೋಗಿದ್ದಾರೆ. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಯನ್ನು ಕಾಡಿಗೆ ಓಡಿಸಿದರು.</p>.<p>ಗಾಯಾಳು ರುದ್ರಸ್ವಾಮಿ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬೆಂಗಳೂರಿನ ನಿಮ್ಹಾನ್ಸ್ಗೆ ದಾಖಲಿಸಲಾಗಿದೆ.</p>.<p>ಅವರ ಆರೋಗ್ಯ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿರುವುದಾಗಿ ಅರಣ್ಯ ಇಲಾಖೆ ಆರ್ಎಫ್ಒ ಅನಿಲ್ ಕುಮಾರ್ ತಿಳಿಸಿದ್ದಾರೆ. ಎಸಿಎಫ್ ನಾಗೇಂದ್ರ ಪ್ರಸಾದ್ ಅವರು ಘಟನೆ ಕುರಿತು ಮಾಹಿತಿ <br />ಪಡೆದರು. </p>.<p>ವೈಲ್ಡ್ ಲೈಫ್ಎ ಸಿಎಫ್ ನಾಗೇಂದ್ರ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ದಾಳಿ ಮಾಡಿರುವ ಒಂಟಿ ಆನೆಯನ್ನು ಅರಣ್ಯ ಇಲಾಖೆ ನೌಕರರು ಮತ್ತು ಸಿಬ್ಬಂದಿಗಳು ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಯಶಸ್ವಿಯಾಗಿ ಓಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>