<p><strong>ಕನಕಪುರ (ರಾಮನಗರ):</strong> ತಾಲ್ಲೂಕಿನ ಸಂಗಮ ವನ್ಯಜೀವಿ ವಲಯದಲ್ಲಿರುವ ಉಯ್ಯಂಬಳ್ಳಿ ಗ್ರಾಮದ ಜಮೀನಿನಲ್ಲಿ 6 ವರ್ಷದ ಹಿಂದೆ ವಿದ್ಯುತ್ ಪ್ರವಹಿಸಿ ಕಾಡಾನೆ ಮರಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಜಮೀನು ಮಾಲೀಕ ಶಿವಲಿಂಗೇಗೌಡ ಎಂಬುವರಿಗೆ ₹5 ಸಾವಿರ ದಂಡ ವಿಧಿಸಿದೆ.</p><p>ಬೆಳೆ ರಕ್ಷಿಸಿಕೊಳ್ಳುವುದಕ್ಕಾಗಿ ಶಿವಲಿಂಗೇಗೌಡ ತಮ್ಮ ಜಮೀನಿನ ಸುತ್ತ ಅಳವಡಿಸಿದ್ದ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು. 2019ರ ಏಪ್ರಿಲ್ 4ರಂದು ಆಹಾರ ಅರಸಿ ಜಮೀನಿಗೆ ಬಂದಿದ್ದ ಕಾಡಾನೆ ಬೇಲಿ ದಾಟುವಾಗ ವಿದ್ಯುತ್ ಪ್ರವಹಿಸಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿತ್ತು.</p><p>ಘಟನೆ ಕುರಿತು ಸಾತನೂರು ಠಾಣೆ ಪೊಲೀಸರು ಶಿವಲಿಂಗೇಗೌಡ ವಿರುದ್ಧ ಕರ್ನಾಟಕ ವಿದ್ಯುತ್ ಸುಧಾರಣೆ ಕಾಯ್ದೆ–1999ರಡಿ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖಾಧಿಕಾರಿ ಮುರಳಿ ವಿಚಾರಣೆ ನಡೆಸಿ ಸಾಕ್ಷ್ಯ ಸಮೇತ ಕೋರ್ಟ್ಗೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.</p><p>ವಿಚಾರಣೆ ಕೈಗೆತ್ತಿಕೊಂಡಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯ ಅವರು, ಶಿವಲಿಂಗೇಗೌಡ ವಿರುದ್ಧದ ಆರೋಪ ಸಾಬೀತಾಗಿದ್ದರಿಂದ ₹5 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದರು. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕಿ ವಾಸವಿ ಅಂಗಡಿ ವಾದ ಮಂಡಿಸಿದ್ದರು.</p><p>ವಿಚಾರಣೆ ಅವಧಿಯಲ್ಲಿ ಸಾಕ್ಷಿದಾರರನ್ನು ಕೋರ್ಟ್ಗೆ ಹಾಜರುಪಡಿಸಿ, ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಠಾಣೆಯ ಕೋರ್ಟ್ ಸಿಬ್ಬಂದಿ ಮೆಹಬೂಬ್ ಸಾಬ್ ಮುಲ್ಲಾ ಹಾಗೂ ಇತರ ಅಧಿಕಾರಿಗಳು ಶ್ರಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ (ರಾಮನಗರ):</strong> ತಾಲ್ಲೂಕಿನ ಸಂಗಮ ವನ್ಯಜೀವಿ ವಲಯದಲ್ಲಿರುವ ಉಯ್ಯಂಬಳ್ಳಿ ಗ್ರಾಮದ ಜಮೀನಿನಲ್ಲಿ 6 ವರ್ಷದ ಹಿಂದೆ ವಿದ್ಯುತ್ ಪ್ರವಹಿಸಿ ಕಾಡಾನೆ ಮರಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಜಮೀನು ಮಾಲೀಕ ಶಿವಲಿಂಗೇಗೌಡ ಎಂಬುವರಿಗೆ ₹5 ಸಾವಿರ ದಂಡ ವಿಧಿಸಿದೆ.</p><p>ಬೆಳೆ ರಕ್ಷಿಸಿಕೊಳ್ಳುವುದಕ್ಕಾಗಿ ಶಿವಲಿಂಗೇಗೌಡ ತಮ್ಮ ಜಮೀನಿನ ಸುತ್ತ ಅಳವಡಿಸಿದ್ದ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು. 2019ರ ಏಪ್ರಿಲ್ 4ರಂದು ಆಹಾರ ಅರಸಿ ಜಮೀನಿಗೆ ಬಂದಿದ್ದ ಕಾಡಾನೆ ಬೇಲಿ ದಾಟುವಾಗ ವಿದ್ಯುತ್ ಪ್ರವಹಿಸಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿತ್ತು.</p><p>ಘಟನೆ ಕುರಿತು ಸಾತನೂರು ಠಾಣೆ ಪೊಲೀಸರು ಶಿವಲಿಂಗೇಗೌಡ ವಿರುದ್ಧ ಕರ್ನಾಟಕ ವಿದ್ಯುತ್ ಸುಧಾರಣೆ ಕಾಯ್ದೆ–1999ರಡಿ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖಾಧಿಕಾರಿ ಮುರಳಿ ವಿಚಾರಣೆ ನಡೆಸಿ ಸಾಕ್ಷ್ಯ ಸಮೇತ ಕೋರ್ಟ್ಗೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.</p><p>ವಿಚಾರಣೆ ಕೈಗೆತ್ತಿಕೊಂಡಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯ ಅವರು, ಶಿವಲಿಂಗೇಗೌಡ ವಿರುದ್ಧದ ಆರೋಪ ಸಾಬೀತಾಗಿದ್ದರಿಂದ ₹5 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದರು. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕಿ ವಾಸವಿ ಅಂಗಡಿ ವಾದ ಮಂಡಿಸಿದ್ದರು.</p><p>ವಿಚಾರಣೆ ಅವಧಿಯಲ್ಲಿ ಸಾಕ್ಷಿದಾರರನ್ನು ಕೋರ್ಟ್ಗೆ ಹಾಜರುಪಡಿಸಿ, ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಠಾಣೆಯ ಕೋರ್ಟ್ ಸಿಬ್ಬಂದಿ ಮೆಹಬೂಬ್ ಸಾಬ್ ಮುಲ್ಲಾ ಹಾಗೂ ಇತರ ಅಧಿಕಾರಿಗಳು ಶ್ರಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>