<p><strong>ಕನಕಪುರ</strong>: ಸಿಲಿಂಡರ್ ಪೈಪ್ನಲ್ಲಿ ಅನಿಲ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯಲ್ಲಿ ಸುಟ್ಟು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾನೆ.</p>.<p>ಇಲ್ಲಿನ ರಾಮನಗರ ರಸ್ತೆಯಲ್ಲಿರುವ ಅಮರ ನಾರಾಯಣ ಬ್ಲಾಕ್ ನಿವಾಸಿ ಪ್ರಶಾಂತ್ (22) ಮೃತ ಯುವಕ.</p>.<p>ಬೀದಿಬದಿಯಲ್ಲಿ ವ್ಯಾಪಾರ ಮಾಡಲು ಸೋಮವಾರ ಮನೆ ಮುಂಭಾಗದಲ್ಲಿ ಕಾರದ ತಿಂಡಿಗಳನ್ನು ಎಣ್ಣೆಯಲ್ಲಿ ಕರಿಯುವಾಗ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ತಂದೆ ಸಿದ್ದರಾಜು, ತಾಯಿ ಸವಿತಾ ಗಾಯಗೊಂಡಿದ್ದರು.</p>.<p>ಈ ವೇಳೆ ಪ್ರಶಾಂತ್ ಹೊಟ್ಟೆ, ಕೈ ಮತ್ತು ಮುಖದ ಭಾಗದ ಸುಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಮೂವರು ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಮಂಗಳವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಶಾಂತ್ ಮೃತಪಟ್ಟಿದ್ದಾನೆ ಪೊಲೀಸರು ತಿಳಿಸಿದ್ದಾರೆ.</p>.<p>ಅವರ ತಂದೆ ಮತ್ತು ತಾಯಿ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಅಂತ್ಯಸಂಸ್ಕಾರ ಮಂಗಳವಾರ ದೇಗುಲಮಠದ ರುದ್ರ ಭೂಮಿಯಲ್ಲಿ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಸಿಲಿಂಡರ್ ಪೈಪ್ನಲ್ಲಿ ಅನಿಲ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯಲ್ಲಿ ಸುಟ್ಟು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾನೆ.</p>.<p>ಇಲ್ಲಿನ ರಾಮನಗರ ರಸ್ತೆಯಲ್ಲಿರುವ ಅಮರ ನಾರಾಯಣ ಬ್ಲಾಕ್ ನಿವಾಸಿ ಪ್ರಶಾಂತ್ (22) ಮೃತ ಯುವಕ.</p>.<p>ಬೀದಿಬದಿಯಲ್ಲಿ ವ್ಯಾಪಾರ ಮಾಡಲು ಸೋಮವಾರ ಮನೆ ಮುಂಭಾಗದಲ್ಲಿ ಕಾರದ ತಿಂಡಿಗಳನ್ನು ಎಣ್ಣೆಯಲ್ಲಿ ಕರಿಯುವಾಗ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ತಂದೆ ಸಿದ್ದರಾಜು, ತಾಯಿ ಸವಿತಾ ಗಾಯಗೊಂಡಿದ್ದರು.</p>.<p>ಈ ವೇಳೆ ಪ್ರಶಾಂತ್ ಹೊಟ್ಟೆ, ಕೈ ಮತ್ತು ಮುಖದ ಭಾಗದ ಸುಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಮೂವರು ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಮಂಗಳವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಶಾಂತ್ ಮೃತಪಟ್ಟಿದ್ದಾನೆ ಪೊಲೀಸರು ತಿಳಿಸಿದ್ದಾರೆ.</p>.<p>ಅವರ ತಂದೆ ಮತ್ತು ತಾಯಿ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಅಂತ್ಯಸಂಸ್ಕಾರ ಮಂಗಳವಾರ ದೇಗುಲಮಠದ ರುದ್ರ ಭೂಮಿಯಲ್ಲಿ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>