<p>ಕನಕಪುರ: ತಾಲ್ಲೂಕಿನ ಗೊಟ್ಟಿಗೆಹಳ್ಳಿ ಪರಂಜ್ಯೋತಿ ಮಠದಲ್ಲಿ 20ವರ್ಷಗಳಿಂದ ಪ್ರತಿಷ್ಠಾಪನೆಗೊಳ್ಳದೆ ಬಯಲಿನಲ್ಲೇ ಇದ್ದ ಗಾಯತ್ರಿ ದೇವಿ ವಿಗ್ರಹ ಗುರುವಾರ ಪ್ರತಿಷ್ಠಾಪನೆಗೊಂಡು ಶುಕ್ರವಾರ ದೇವಾಲಯ ಉದ್ಘಾಟನೆ ಕಾರ್ಯಕ್ರಮ ನೆರವೇರಿತು.</p>.<p>ಪರಂ ಜ್ಯೋತಿ ಮಠವನ್ನು ಪರಮೇಶ್ವರಾನಂದ ಸ್ವಾಮೀಜಿ ಸುಮಾರು 50 ವರ್ಷಗಳ ಹಿಂದೆ ಸಣ್ಣ ಗುಡಿಸಿಲಿನಲ್ಲಿ ಪ್ರಾರಂಭ ಮಾಡಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ.</p>.<p>ಪರಂ ಜ್ಯೋತಿ ಮಠವು ಪರಮ ಜ್ಯೋತಿ ಲಿಂಗೇಶ್ವರ ದೇವಸ್ಥಾನ ಮತ್ತು ಗಾಯತ್ರಿ ದೇವಿಯ ದೇವಸ್ಥಾನದೊಂದಿಗೆ ಪುಣ್ಯಕ್ಷೇತ್ರ ಹಾಗೂ ಧಾರ್ಮಿಕ ಕೇಂದ್ರವಾಗಿ ರೂಪುಗೊಂಡಿದೆ. ಪರಮೇಶ್ವರಾನಂದ ಸ್ವಾಮೀಜಿ ಇದಕ್ಕೆ ಶ್ರಮಿಸಿದ್ದಾರೆ.</p>.<p>ಚಂದ್ರು, ಪ್ರಭಾಕರ್, ಗೋವಿಂದರಾಜು, ಗೊಟ್ಟಿಗೆಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-14-1783120977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ತಾಲ್ಲೂಕಿನ ಗೊಟ್ಟಿಗೆಹಳ್ಳಿ ಪರಂಜ್ಯೋತಿ ಮಠದಲ್ಲಿ 20ವರ್ಷಗಳಿಂದ ಪ್ರತಿಷ್ಠಾಪನೆಗೊಳ್ಳದೆ ಬಯಲಿನಲ್ಲೇ ಇದ್ದ ಗಾಯತ್ರಿ ದೇವಿ ವಿಗ್ರಹ ಗುರುವಾರ ಪ್ರತಿಷ್ಠಾಪನೆಗೊಂಡು ಶುಕ್ರವಾರ ದೇವಾಲಯ ಉದ್ಘಾಟನೆ ಕಾರ್ಯಕ್ರಮ ನೆರವೇರಿತು.</p>.<p>ಪರಂ ಜ್ಯೋತಿ ಮಠವನ್ನು ಪರಮೇಶ್ವರಾನಂದ ಸ್ವಾಮೀಜಿ ಸುಮಾರು 50 ವರ್ಷಗಳ ಹಿಂದೆ ಸಣ್ಣ ಗುಡಿಸಿಲಿನಲ್ಲಿ ಪ್ರಾರಂಭ ಮಾಡಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ.</p>.<p>ಪರಂ ಜ್ಯೋತಿ ಮಠವು ಪರಮ ಜ್ಯೋತಿ ಲಿಂಗೇಶ್ವರ ದೇವಸ್ಥಾನ ಮತ್ತು ಗಾಯತ್ರಿ ದೇವಿಯ ದೇವಸ್ಥಾನದೊಂದಿಗೆ ಪುಣ್ಯಕ್ಷೇತ್ರ ಹಾಗೂ ಧಾರ್ಮಿಕ ಕೇಂದ್ರವಾಗಿ ರೂಪುಗೊಂಡಿದೆ. ಪರಮೇಶ್ವರಾನಂದ ಸ್ವಾಮೀಜಿ ಇದಕ್ಕೆ ಶ್ರಮಿಸಿದ್ದಾರೆ.</p>.<p>ಚಂದ್ರು, ಪ್ರಭಾಕರ್, ಗೋವಿಂದರಾಜು, ಗೊಟ್ಟಿಗೆಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-14-1783120977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>