<p><strong>ಕನಕಪುರ:</strong> ನಗರದಲ್ಲಿ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳ–ಕೊಳ್ಳಗಳು ತುಂಬಿ ಹರಿದಿವೆ. ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿ, ವಿದ್ಯುತ್ ಕಂಬಗಳು ಧರೆಗೆ ಉರುಳಿ, ಹೆಚ್ಚಿನ ಅನಾಹುತ ಸಂಭವಿಸಿದೆ. </p>.<p>ನಗರದ ಮುಖ್ಯರಸ್ತೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪಕ್ಕದಲ್ಲಿ ದೊಡ್ಡ ಹಳ್ಳವಿದೆ. ಈ ಹಳ್ಳಕ್ಕೆ ಹೊಂದಿಕೊಂಡಂತೆ ರೂರಲ್ ಎಜುಕೇಶನ್ ಸೊಸೈಟಿಯ ವಾಣಿಜ್ಯ ಮಳಿಗೆ ಇದ್ದು, ಅದರ ತ್ಯಾಜ್ಯವನ್ನು ಹಳ್ಳಕ್ಕೆ ಸುರಿಯಲಾಗಿರುವುದರಿಂದ ಹಳ್ಳದಲ್ಲಿ ಭಾರಿ ಪ್ರಮಾಣದ ನೀರು ಬಂದಿದೆ. ನೀರು ಹಳ್ಳದಿಂದ ಪಕ್ಕದ ಹಳೆಯ ಕೆನರಾ ಬ್ಯಾಂಕಿನ ಕೆಳಭಾಗದಲ್ಲಿರುವ ಅಂಗಡಿ ಮಳಿಗೆಗಳಿಗೆ ನುಗ್ಗಿದೆ.</p>.<p>ನೀರು ನುಗ್ಗಿದ್ದರಿಂದ ಜೆರಾಕ್ಸ್ ಯಂತ್ರ, ತೂಕದ ಯಂತ್ರ ಸೇರಿದಂತೆ ಹಲವು ಯಂತ್ರೋಪಕರಣಗಳು ನಾಶವಾಗಿವೆ.</p>.<p>ಸೇಂಟ್ ಥಾಮಸ್ ಶಾಲೆ ಪಕ್ಕದ ಹಳ್ಳದಲ್ಲಿಯೂ ನೀರಿನ ಹರಿವು ಹೆಚ್ಚಾಗಿದ್ದು, ಹಳ್ಳಕ್ಕೆ ಕಟ್ಟಿದ್ದ ತಡೆಗೋಡೆ ಕೊಚ್ಚಿಹೋಗಿದೆ. ವಿದ್ಯುತ್ ಸರಬರಾಜು ಕಂಬ ಧರೆಗುರುಳಿದಿದೆ. ರಾತ್ರಿಯಿಡೀ ವಿದ್ಯುತ್ ಇಲ್ಲದೆ ಬಡಾವಣೆ ಜನರು ಪರದಾಡುವಂತಾಗಿದೆ.</p>.<p>ನಗರದ ಹಲವೆಡೆ ಮಳೆಯಿಂದ ಹಾನಿ ಸಂಭವಿಸಿದೆ. ನಗರಸಭೆ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ಹಳ್ಳದಲ್ಲಿದ್ದ ಹೂಳು ತೆಗೆದಿದ್ದರೆ ನೀರು ಸರಾಗವಾಗಿ ಹರಿಯುತ್ತಿತ್ತು ಎನ್ನುತ್ತಾರೆ ಸಾರ್ವಜನಿಕರು. </p>.<p>ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿ ಅಂಗಡಿಯಲ್ಲಿನ ಯಂತ್ರೋಪಕರಣ ವಸ್ತುಗಳು ನಾಶವಾಗಿದ್ದು, ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಬೇಕು. ಹಳ್ಳದಲ್ಲಿನ ಹೂಳು ತೆಗಿಸಬೇಕು ಎಂದು ಸಂತ್ರಸ್ತರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ನಗರದಲ್ಲಿ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳ–ಕೊಳ್ಳಗಳು ತುಂಬಿ ಹರಿದಿವೆ. ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿ, ವಿದ್ಯುತ್ ಕಂಬಗಳು ಧರೆಗೆ ಉರುಳಿ, ಹೆಚ್ಚಿನ ಅನಾಹುತ ಸಂಭವಿಸಿದೆ. </p>.<p>ನಗರದ ಮುಖ್ಯರಸ್ತೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪಕ್ಕದಲ್ಲಿ ದೊಡ್ಡ ಹಳ್ಳವಿದೆ. ಈ ಹಳ್ಳಕ್ಕೆ ಹೊಂದಿಕೊಂಡಂತೆ ರೂರಲ್ ಎಜುಕೇಶನ್ ಸೊಸೈಟಿಯ ವಾಣಿಜ್ಯ ಮಳಿಗೆ ಇದ್ದು, ಅದರ ತ್ಯಾಜ್ಯವನ್ನು ಹಳ್ಳಕ್ಕೆ ಸುರಿಯಲಾಗಿರುವುದರಿಂದ ಹಳ್ಳದಲ್ಲಿ ಭಾರಿ ಪ್ರಮಾಣದ ನೀರು ಬಂದಿದೆ. ನೀರು ಹಳ್ಳದಿಂದ ಪಕ್ಕದ ಹಳೆಯ ಕೆನರಾ ಬ್ಯಾಂಕಿನ ಕೆಳಭಾಗದಲ್ಲಿರುವ ಅಂಗಡಿ ಮಳಿಗೆಗಳಿಗೆ ನುಗ್ಗಿದೆ.</p>.<p>ನೀರು ನುಗ್ಗಿದ್ದರಿಂದ ಜೆರಾಕ್ಸ್ ಯಂತ್ರ, ತೂಕದ ಯಂತ್ರ ಸೇರಿದಂತೆ ಹಲವು ಯಂತ್ರೋಪಕರಣಗಳು ನಾಶವಾಗಿವೆ.</p>.<p>ಸೇಂಟ್ ಥಾಮಸ್ ಶಾಲೆ ಪಕ್ಕದ ಹಳ್ಳದಲ್ಲಿಯೂ ನೀರಿನ ಹರಿವು ಹೆಚ್ಚಾಗಿದ್ದು, ಹಳ್ಳಕ್ಕೆ ಕಟ್ಟಿದ್ದ ತಡೆಗೋಡೆ ಕೊಚ್ಚಿಹೋಗಿದೆ. ವಿದ್ಯುತ್ ಸರಬರಾಜು ಕಂಬ ಧರೆಗುರುಳಿದಿದೆ. ರಾತ್ರಿಯಿಡೀ ವಿದ್ಯುತ್ ಇಲ್ಲದೆ ಬಡಾವಣೆ ಜನರು ಪರದಾಡುವಂತಾಗಿದೆ.</p>.<p>ನಗರದ ಹಲವೆಡೆ ಮಳೆಯಿಂದ ಹಾನಿ ಸಂಭವಿಸಿದೆ. ನಗರಸಭೆ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ಹಳ್ಳದಲ್ಲಿದ್ದ ಹೂಳು ತೆಗೆದಿದ್ದರೆ ನೀರು ಸರಾಗವಾಗಿ ಹರಿಯುತ್ತಿತ್ತು ಎನ್ನುತ್ತಾರೆ ಸಾರ್ವಜನಿಕರು. </p>.<p>ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿ ಅಂಗಡಿಯಲ್ಲಿನ ಯಂತ್ರೋಪಕರಣ ವಸ್ತುಗಳು ನಾಶವಾಗಿದ್ದು, ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಬೇಕು. ಹಳ್ಳದಲ್ಲಿನ ಹೂಳು ತೆಗಿಸಬೇಕು ಎಂದು ಸಂತ್ರಸ್ತರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>