<p><strong>ಕನಕಪುರ</strong>: ಹಿಂದೂ ಸಮಾಜದ ಏಕತೆ ಮತ್ತು ಸಾಂಸ್ಕೃತಿಕ ಸಂರಕ್ಷಣೆಗಾಗಿ ಫೆ.9ರಂದು ತಾಲ್ಲೂಕು ಕ್ರೀಡಾಂಗಣದಲ್ಲಿ ಹಿಂದೂ ಸಮಾಜೋತ್ಸವ ಏರ್ಪಡಿಸಲಾಗಿದೆ ಎಂದು ಆಚರಣೆ ಸಮಿತಿ ಅಧ್ಯಕ್ಷ ಬಿ.ನಾಗರಾಜು ಈ ಮಾಹಿತಿ ನೀಡಿದರು.</p>.<p>ಕೋಟೆ ಗಣೇಶ ದೇವಸ್ಥಾನದಲ್ಲಿ ನಡೆದ ಪೂರ್ವತಯಾರಿ ಸಭೆಯಲ್ಲಿ ಮಾತನಾಡಿ, ಈ ಕಾರ್ಯಕ್ರಮವನ್ನು ಹೋಬಳಿ ಮಟ್ಟದ ನಂತರ ಈಗ ತಾಲ್ಲೂಕು ಮಟ್ಟದಲ್ಲಿ ಏರ್ಪಡಿಸಲಾಗುತ್ತಿದೆ ಎಂದರು.</p>.<p>ಆಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಹೋಟೆಲ್ ನಾಗರಾಜ್, ದೇಶದ ಸಂಸ್ಕೃತಿ ಮತ್ತು ಸಂಪ್ರದಾಯ ಸಂರಕ್ಷಣೆಯಲ್ಲಿ ಹಿಂದೂ ಧರ್ಮದ ಪಾತ್ರದ ಬಗ್ಗೆ ಮಾತನಾಡಿದರು.</p>.<p>ಸೋಮವಾರ ಸಂಜೆ 3ಕ್ಕೆ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಶೋಭಾಯಾತ್ರೆ ಪ್ರಾರಂಭವಾಗಿ, ಎಂ.ಜಿ.ರಸ್ತೆ ಮತ್ತು ಕೆಂಗಲ್ ಹನುಮಂತಯ್ಯ ವೃತ್ತದ ಮೂಲಕ ತಾಲ್ಲೂಕು ಕ್ರೀಡಾಂಗಣ ತಲುಪಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಶಂಕರ್ ಶಾನುಭಾಗ್ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ.</p>.<p>ಸಮಿತಿ ಉಪಾಧ್ಯಕ್ಷ ಚಿನ್ನಸ್ವಾಮಿ, ಖಜಾಂಚಿ ವೆಂಕಟೇಶ್, ಸಮಿತಿ ಪದಾಧಿಕಾರಿಗಳಾದ ಸ್ಟುಡಿಯೋ ಚಂದ್ರು, ಕೆ.ವಿ.ಆನಂದ್, ಡಿ.ಶ್ರೀನಿವಾಸ್, ವಿನಯ್, ಕೆ.ಎಂ.ಮಂಜುನಾಥ್, ಭಗತ್ ರಾಮ್, ವಕೀಲ ನಂಜೇಗೌಡ, ಪರಮೇಶ್, ಬಸವರಾಜು, ಆನಂದ, ಆಟೋ ಕುಮಾರ್ ಸೇರಿದಂತೆ ಹಿಂದೂ ಸಮಾಜೋತ್ಸವ ಸಮಿತಿ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಹಿಂದೂ ಸಮಾಜದ ಏಕತೆ ಮತ್ತು ಸಾಂಸ್ಕೃತಿಕ ಸಂರಕ್ಷಣೆಗಾಗಿ ಫೆ.9ರಂದು ತಾಲ್ಲೂಕು ಕ್ರೀಡಾಂಗಣದಲ್ಲಿ ಹಿಂದೂ ಸಮಾಜೋತ್ಸವ ಏರ್ಪಡಿಸಲಾಗಿದೆ ಎಂದು ಆಚರಣೆ ಸಮಿತಿ ಅಧ್ಯಕ್ಷ ಬಿ.ನಾಗರಾಜು ಈ ಮಾಹಿತಿ ನೀಡಿದರು.</p>.<p>ಕೋಟೆ ಗಣೇಶ ದೇವಸ್ಥಾನದಲ್ಲಿ ನಡೆದ ಪೂರ್ವತಯಾರಿ ಸಭೆಯಲ್ಲಿ ಮಾತನಾಡಿ, ಈ ಕಾರ್ಯಕ್ರಮವನ್ನು ಹೋಬಳಿ ಮಟ್ಟದ ನಂತರ ಈಗ ತಾಲ್ಲೂಕು ಮಟ್ಟದಲ್ಲಿ ಏರ್ಪಡಿಸಲಾಗುತ್ತಿದೆ ಎಂದರು.</p>.<p>ಆಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಹೋಟೆಲ್ ನಾಗರಾಜ್, ದೇಶದ ಸಂಸ್ಕೃತಿ ಮತ್ತು ಸಂಪ್ರದಾಯ ಸಂರಕ್ಷಣೆಯಲ್ಲಿ ಹಿಂದೂ ಧರ್ಮದ ಪಾತ್ರದ ಬಗ್ಗೆ ಮಾತನಾಡಿದರು.</p>.<p>ಸೋಮವಾರ ಸಂಜೆ 3ಕ್ಕೆ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಶೋಭಾಯಾತ್ರೆ ಪ್ರಾರಂಭವಾಗಿ, ಎಂ.ಜಿ.ರಸ್ತೆ ಮತ್ತು ಕೆಂಗಲ್ ಹನುಮಂತಯ್ಯ ವೃತ್ತದ ಮೂಲಕ ತಾಲ್ಲೂಕು ಕ್ರೀಡಾಂಗಣ ತಲುಪಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಶಂಕರ್ ಶಾನುಭಾಗ್ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ.</p>.<p>ಸಮಿತಿ ಉಪಾಧ್ಯಕ್ಷ ಚಿನ್ನಸ್ವಾಮಿ, ಖಜಾಂಚಿ ವೆಂಕಟೇಶ್, ಸಮಿತಿ ಪದಾಧಿಕಾರಿಗಳಾದ ಸ್ಟುಡಿಯೋ ಚಂದ್ರು, ಕೆ.ವಿ.ಆನಂದ್, ಡಿ.ಶ್ರೀನಿವಾಸ್, ವಿನಯ್, ಕೆ.ಎಂ.ಮಂಜುನಾಥ್, ಭಗತ್ ರಾಮ್, ವಕೀಲ ನಂಜೇಗೌಡ, ಪರಮೇಶ್, ಬಸವರಾಜು, ಆನಂದ, ಆಟೋ ಕುಮಾರ್ ಸೇರಿದಂತೆ ಹಿಂದೂ ಸಮಾಜೋತ್ಸವ ಸಮಿತಿ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>