<p>ಕನಕಪುರ: ತಳಮಟ್ಟದ ಆರೋಗ್ಯ ಕೇಂದ್ರಗಳನ್ನು ಬಲಪಡಿಸಿದಾಗ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಆರೋಗ್ಯಸೇವೆ ಮತ್ತು ಚಿಕಿತ್ಸೆ ಸಾರ್ವಜನಿಕವಾಗಿ ಸಿಗುತ್ತದೆ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ಆಸ್ಪತ್ರೆಯಲ್ಲಿ ಚೆನ್ನಮ್ಮ ದೇವೇಗೌಡ ಚಾರಿಟಬಲ್ ಟ್ರಸ್ಟ್ನಿಂದ ₹31.5 ಲಕ್ಷದ ಶಸ್ತ್ರಚಿಕಿತ್ಸೆ ಉಪಕರಣಗಳನ್ನು ಶುಕ್ರವಾರ ಆಸ್ಪತ್ರೆಗೆ ಹಸ್ತಾಂತರಿಸಿ ಮಾತನಾಡಿದರು.</p>.<p>ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆ ಪ್ರತಿಯೊಬ್ಬರಿಗೂ ಸಿಗಬೇಕು. ನಗರ ಪ್ರದೇಶಗಳಿಗೆ ಗ್ರಾಮೀಣ ಜನತೆ ಬರುವುದನ್ನು ತಪ್ಪಿಸಲು ತಳಮಟ್ಟದಲ್ಲಿ ಸೌಕರ್ಯ ಕಲ್ಪಿಸಬೇಕು ಎಂದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳ ಉನ್ನತಿಕರಣವಾಗಬೇಕು. ಇಲ್ಲಿನ ಹೆರಿಗೆ ಆಸ್ಪತ್ರೆಯಲ್ಲಿ ತಿಂಗಳಿಗೆ 150ರಷ್ಟು ಹೆರಿಗೆ ಆಗುತ್ತಿದೆ. ಆದರೆ ಮೂಲಸೌಕರ್ಯ, ಯಂತ್ರೋಪಕರಣಗಳ ಕೊರತೆ ಇರುವುದಾಗಿ ಆಸ್ಪತ್ರೆಯ ಎಎಂಒ ಡಾ.ಪ್ರತಿಭಾದೇವಿ ತಿಳಿಸಿದ್ದರು. ಟ್ರಸ್ಟ್ನಿಂದ ₹31.5 ಲಕ್ಷದ ಉಪಕರಣಗಳನ್ನು ಖರೀದಿಸಿ ಹಸ್ತಾಂತರಿಸಲಾಗಿದೆ ಎಂದರು.</p>.<p>ಇಂದಿನ ಜೀವನ ಶೈಲಿಯಿಂದ ರೋಗಗಳು ಹೆಚ್ಚಾಗುತ್ತಿವೆ. ಹಿಂದಿನ ಕಾಲದಲ್ಲಿ ಮಕ್ಕಳು ತಂದೆ– ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದರು. ಇಂದು ತಂದೆ– ತಾಯಿ ಮಕ್ಕಳನ್ನು ಆಸ್ಪತ್ರೆಗೆ ಕರೆತರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕನಕಪುರದಲ್ಲಿ ಸಿಟಿ ಸ್ಕ್ಯಾನ್ ಸೌಲಭ್ಯವಿಲ್ಲ, ಮುಂದಿನ ದಿನಗಳಲ್ಲಿ ಅದರ ವ್ಯವಸ್ಥೆ ಮಾಡಲಾಗುವುದು. ಅದುವರೆಗೆ ದಯಾನಂದ ಸಾಗರ್ ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಜನರು ಅಲೆದಾಡುವುದನ್ನು ತಪ್ಪಿಸಬೇಕು ಎಂದರು.</p>.<p>ಅನಸೂಯ ಮಂಜುನಾಥ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಮಂಜುನಾಥ್, ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರತಿಮಾದೇವಿ, ದಿಶಾ ಸಮಿತಿ ಸದಸ್ಯೆ ಶೋಭಾ ಶಿವಲಿಂಗೇಗೌಡ, ಬಿಜೆಪಿ ಅಧ್ಯಕ್ಷ ಕೆ.ಪಿ.ಕುಮಾರ್, ಚೂಡಾಮಣಿ, ಚಂದ್ರು ಸೇರಿದಂತೆ ಆಸ್ಪತ್ರೆ ವೈದ್ಯರು, ನೌಕರರು, ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-14-2089546430</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ತಳಮಟ್ಟದ ಆರೋಗ್ಯ ಕೇಂದ್ರಗಳನ್ನು ಬಲಪಡಿಸಿದಾಗ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಆರೋಗ್ಯಸೇವೆ ಮತ್ತು ಚಿಕಿತ್ಸೆ ಸಾರ್ವಜನಿಕವಾಗಿ ಸಿಗುತ್ತದೆ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ಆಸ್ಪತ್ರೆಯಲ್ಲಿ ಚೆನ್ನಮ್ಮ ದೇವೇಗೌಡ ಚಾರಿಟಬಲ್ ಟ್ರಸ್ಟ್ನಿಂದ ₹31.5 ಲಕ್ಷದ ಶಸ್ತ್ರಚಿಕಿತ್ಸೆ ಉಪಕರಣಗಳನ್ನು ಶುಕ್ರವಾರ ಆಸ್ಪತ್ರೆಗೆ ಹಸ್ತಾಂತರಿಸಿ ಮಾತನಾಡಿದರು.</p>.<p>ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆ ಪ್ರತಿಯೊಬ್ಬರಿಗೂ ಸಿಗಬೇಕು. ನಗರ ಪ್ರದೇಶಗಳಿಗೆ ಗ್ರಾಮೀಣ ಜನತೆ ಬರುವುದನ್ನು ತಪ್ಪಿಸಲು ತಳಮಟ್ಟದಲ್ಲಿ ಸೌಕರ್ಯ ಕಲ್ಪಿಸಬೇಕು ಎಂದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳ ಉನ್ನತಿಕರಣವಾಗಬೇಕು. ಇಲ್ಲಿನ ಹೆರಿಗೆ ಆಸ್ಪತ್ರೆಯಲ್ಲಿ ತಿಂಗಳಿಗೆ 150ರಷ್ಟು ಹೆರಿಗೆ ಆಗುತ್ತಿದೆ. ಆದರೆ ಮೂಲಸೌಕರ್ಯ, ಯಂತ್ರೋಪಕರಣಗಳ ಕೊರತೆ ಇರುವುದಾಗಿ ಆಸ್ಪತ್ರೆಯ ಎಎಂಒ ಡಾ.ಪ್ರತಿಭಾದೇವಿ ತಿಳಿಸಿದ್ದರು. ಟ್ರಸ್ಟ್ನಿಂದ ₹31.5 ಲಕ್ಷದ ಉಪಕರಣಗಳನ್ನು ಖರೀದಿಸಿ ಹಸ್ತಾಂತರಿಸಲಾಗಿದೆ ಎಂದರು.</p>.<p>ಇಂದಿನ ಜೀವನ ಶೈಲಿಯಿಂದ ರೋಗಗಳು ಹೆಚ್ಚಾಗುತ್ತಿವೆ. ಹಿಂದಿನ ಕಾಲದಲ್ಲಿ ಮಕ್ಕಳು ತಂದೆ– ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದರು. ಇಂದು ತಂದೆ– ತಾಯಿ ಮಕ್ಕಳನ್ನು ಆಸ್ಪತ್ರೆಗೆ ಕರೆತರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕನಕಪುರದಲ್ಲಿ ಸಿಟಿ ಸ್ಕ್ಯಾನ್ ಸೌಲಭ್ಯವಿಲ್ಲ, ಮುಂದಿನ ದಿನಗಳಲ್ಲಿ ಅದರ ವ್ಯವಸ್ಥೆ ಮಾಡಲಾಗುವುದು. ಅದುವರೆಗೆ ದಯಾನಂದ ಸಾಗರ್ ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಜನರು ಅಲೆದಾಡುವುದನ್ನು ತಪ್ಪಿಸಬೇಕು ಎಂದರು.</p>.<p>ಅನಸೂಯ ಮಂಜುನಾಥ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಮಂಜುನಾಥ್, ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರತಿಮಾದೇವಿ, ದಿಶಾ ಸಮಿತಿ ಸದಸ್ಯೆ ಶೋಭಾ ಶಿವಲಿಂಗೇಗೌಡ, ಬಿಜೆಪಿ ಅಧ್ಯಕ್ಷ ಕೆ.ಪಿ.ಕುಮಾರ್, ಚೂಡಾಮಣಿ, ಚಂದ್ರು ಸೇರಿದಂತೆ ಆಸ್ಪತ್ರೆ ವೈದ್ಯರು, ನೌಕರರು, ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-14-2089546430</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>