<p><strong>ಕನಕಪುರ:</strong> ತಾಲ್ಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇವಿನಮರದೊಡ್ಡಿಯಲ್ಲಿ ಜೂನ್ 21 ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಕೋಡಿಹಳ್ಳಿ ಪೊಲೀಸರು ಬೇಧಿಸಿ ಆರೋಪಿಯನ್ನು ಬಂಧಿಸಿ ಅತನಿಂದ ₹2.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.</p>.<p>ಬೇವಿನಮರದೊಡ್ಡಿ ಗ್ರಾಮದ ಅರುಣ್ (25) ಬಂಧಿತ ಆರೋಪಿ. ಬೇವಿನಮರದೊಡ್ಡಿ ಗ್ರಾಮದ ವೀಣಾ ಲೋಕೇಶ್ ಅವರ ಮನೆಯಲ್ಲಿ ಒಂದು ತಿಂಗಳ ಹಿಂದೆ ಕಳ್ಳತನವಾಗಿತ್ತು. ಜಮೀನಿನಲ್ಲಿದ್ದ ಜಾನುವಾರುಗಳನ್ನು ಮನೆಗೆ ಕರೆತರಲು ಹೋದಾಗ ಕಳವಾಗಿತ್ತು. ಈ ಬಗ್ಗೆ ಕೋಡಿಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<p>ದೂರನ್ನು ದಾಖಲಿಸಿಕೊಂಡಿದ್ದ ಪೊಲೀಸರು ಅನುಮಾನದಿಂದ ಓಡಾಡುತ್ತಿದ್ದ ಅರುಣ್ನನ್ನು ಜುಲೈ 24ರಂದು ವಶಕ್ಕೆ ಪಡೆದು ವಿಚರಣೆ ನಡೆಸಿದಾಗ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.</p>.<p>ಪೊಲೀಸರು ಆರೋಪಿಯಿಂದ ₹2.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. </p>.<p>ಎಸ್ಐ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾನ್ಸ್ಟೆಬಲ್ ಧನಂಜಯ, ಕೈಲಾಸ್, ಗಿರೀಶ್, ಅರುಣ್ ಕುಮಾರ್ ಮತ್ತು ಮಲ್ಲೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇವಿನಮರದೊಡ್ಡಿಯಲ್ಲಿ ಜೂನ್ 21 ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಕೋಡಿಹಳ್ಳಿ ಪೊಲೀಸರು ಬೇಧಿಸಿ ಆರೋಪಿಯನ್ನು ಬಂಧಿಸಿ ಅತನಿಂದ ₹2.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.</p>.<p>ಬೇವಿನಮರದೊಡ್ಡಿ ಗ್ರಾಮದ ಅರುಣ್ (25) ಬಂಧಿತ ಆರೋಪಿ. ಬೇವಿನಮರದೊಡ್ಡಿ ಗ್ರಾಮದ ವೀಣಾ ಲೋಕೇಶ್ ಅವರ ಮನೆಯಲ್ಲಿ ಒಂದು ತಿಂಗಳ ಹಿಂದೆ ಕಳ್ಳತನವಾಗಿತ್ತು. ಜಮೀನಿನಲ್ಲಿದ್ದ ಜಾನುವಾರುಗಳನ್ನು ಮನೆಗೆ ಕರೆತರಲು ಹೋದಾಗ ಕಳವಾಗಿತ್ತು. ಈ ಬಗ್ಗೆ ಕೋಡಿಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<p>ದೂರನ್ನು ದಾಖಲಿಸಿಕೊಂಡಿದ್ದ ಪೊಲೀಸರು ಅನುಮಾನದಿಂದ ಓಡಾಡುತ್ತಿದ್ದ ಅರುಣ್ನನ್ನು ಜುಲೈ 24ರಂದು ವಶಕ್ಕೆ ಪಡೆದು ವಿಚರಣೆ ನಡೆಸಿದಾಗ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.</p>.<p>ಪೊಲೀಸರು ಆರೋಪಿಯಿಂದ ₹2.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. </p>.<p>ಎಸ್ಐ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾನ್ಸ್ಟೆಬಲ್ ಧನಂಜಯ, ಕೈಲಾಸ್, ಗಿರೀಶ್, ಅರುಣ್ ಕುಮಾರ್ ಮತ್ತು ಮಲ್ಲೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>