<p><strong>ಕನಕಪುರ</strong>: ಸಾಗುವಳಿ ಭೂಮಿಗೆ 50 ವರ್ಷಗಳಿಂದ ಪೋಡಿ, ದುರಸ್ತಿಯಾಗಿಲ್ಲ. ಕೆರೆಗಳಲ್ಲಿ ನೀರಿಲ್ಲ, ಜನರು ಓಡಾಡಲು ಸರಿಯಾದ ರಸ್ತೆ ಇಲ್ಲದೆ ಗ್ರಾಮ ಹಿಂದುಳಿದಿದೆ. ಮೂಲಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ತೊಪ್ಪಗನಹಳ್ಳಿ ಗ್ರಾಮಸ್ಥರು ರಾಜ್ಯಪಾಲರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.</p>.<p>ಬೇಸಿಗೆ ಪ್ರಾರಂಭವಾಗಿದ್ದು ತಾಲ್ಲೂಕಿನ ಕಸಬಾ ಹೋಬಳಿ ತೊಪ್ಪಗನಹಳ್ಳಿ ಗ್ರಾಮದ ಸುತ್ತಮುತ್ತ ಅಂತರ್ಜಲ ಮಟ್ಟ ಕುಸಿದಿದೆ. ನಿರೀಕ್ಷೆಯಂತೆ ಮಳೆಯಾಗದೆ ಕೆರೆಕಟ್ಟೆಗಳಲ್ಲಿ ನೀರಿಲ್ಲದೆ ಬರಿದಾಗಿವೆ. ದನ ಕರುಗಳು ಮತ್ತು ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ದೂರಿದ್ದಾರೆ. </p>.<p>ಗ್ರಾಮಕ್ಕೆ ಸರ್ಕಾರಿ ಅನುದಾನಗಳಿಲ್ಲದೆ ಅಭಿವೃದ್ಧಿಯಿಂದ ಹಿಂದುಳಿದಿದೆ. ಸೂಕ್ತ ರಸ್ತೆ ಇಲ್ಲದೆ, ಗ್ರಾಮಸ್ಥರು ಓಡಾಡಲು ತೊಂದರೆಯಾಗುತ್ತಿದೆ. ಮೂಲಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಯಾಗಬೇಕು. ಕೆರೆಕಟ್ಟೆಗಳಿಗೆ ನೀರು ತುಂಬಿಸಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಾಗುವಳಿ ಮಂಜುರಾಗಿರುವ ಭೂಮಿಗಳಿಗೆ ಪೋಡಿ ದುರಸ್ತಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ತೊಪ್ಪಗನಹಳ್ಳಿ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ತೊಪ್ಪಗನಹಳ್ಳಿ ಗ್ರಾಮದ ನಂಜೇಗೌಡ, ರಾಮಚಂದ್ರ, ಮಂಜು, ರಾಮೇಗೌಡ, ಕುಮಾರ್, ಪುಟ್ಟರಾಮು, ಶಿವಕುಮಾರ್ ಮೊದಲಾದವರು ರಾಜ್ಯಪಾಲರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಸಾಗುವಳಿ ಭೂಮಿಗೆ 50 ವರ್ಷಗಳಿಂದ ಪೋಡಿ, ದುರಸ್ತಿಯಾಗಿಲ್ಲ. ಕೆರೆಗಳಲ್ಲಿ ನೀರಿಲ್ಲ, ಜನರು ಓಡಾಡಲು ಸರಿಯಾದ ರಸ್ತೆ ಇಲ್ಲದೆ ಗ್ರಾಮ ಹಿಂದುಳಿದಿದೆ. ಮೂಲಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ತೊಪ್ಪಗನಹಳ್ಳಿ ಗ್ರಾಮಸ್ಥರು ರಾಜ್ಯಪಾಲರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.</p>.<p>ಬೇಸಿಗೆ ಪ್ರಾರಂಭವಾಗಿದ್ದು ತಾಲ್ಲೂಕಿನ ಕಸಬಾ ಹೋಬಳಿ ತೊಪ್ಪಗನಹಳ್ಳಿ ಗ್ರಾಮದ ಸುತ್ತಮುತ್ತ ಅಂತರ್ಜಲ ಮಟ್ಟ ಕುಸಿದಿದೆ. ನಿರೀಕ್ಷೆಯಂತೆ ಮಳೆಯಾಗದೆ ಕೆರೆಕಟ್ಟೆಗಳಲ್ಲಿ ನೀರಿಲ್ಲದೆ ಬರಿದಾಗಿವೆ. ದನ ಕರುಗಳು ಮತ್ತು ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ದೂರಿದ್ದಾರೆ. </p>.<p>ಗ್ರಾಮಕ್ಕೆ ಸರ್ಕಾರಿ ಅನುದಾನಗಳಿಲ್ಲದೆ ಅಭಿವೃದ್ಧಿಯಿಂದ ಹಿಂದುಳಿದಿದೆ. ಸೂಕ್ತ ರಸ್ತೆ ಇಲ್ಲದೆ, ಗ್ರಾಮಸ್ಥರು ಓಡಾಡಲು ತೊಂದರೆಯಾಗುತ್ತಿದೆ. ಮೂಲಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಯಾಗಬೇಕು. ಕೆರೆಕಟ್ಟೆಗಳಿಗೆ ನೀರು ತುಂಬಿಸಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಾಗುವಳಿ ಮಂಜುರಾಗಿರುವ ಭೂಮಿಗಳಿಗೆ ಪೋಡಿ ದುರಸ್ತಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ತೊಪ್ಪಗನಹಳ್ಳಿ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ತೊಪ್ಪಗನಹಳ್ಳಿ ಗ್ರಾಮದ ನಂಜೇಗೌಡ, ರಾಮಚಂದ್ರ, ಮಂಜು, ರಾಮೇಗೌಡ, ಕುಮಾರ್, ಪುಟ್ಟರಾಮು, ಶಿವಕುಮಾರ್ ಮೊದಲಾದವರು ರಾಜ್ಯಪಾಲರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>