<p><strong>ಕನಕಪುರ:</strong> ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಚಾಮುಂಡಿಪುರದಲ್ಲಿ ಜಮೀನಿಗೆ ಬೆಂಕಿ ತಗುಲಿ ಮರಗಿಡಗಳು ಸುಟ್ಟು ನಾಶವಾಗಿವೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿದ್ದಾರೆ ಎಂದು ದೂರಿ ಜಮೀನಿನ ಮಾಲೀಕ ನಾಗರಾಜು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ನಾಗರಾಜು ಅವರು ಶನಿವಾರ ನಗರದ ನ್ಯಾಯಾಲಯಕ್ಕೆ ಹೋಗಿ ಸಂಜೆ ವಾಪಸ್ ಬರುವಾಗ ಜಮೀನಿಗೆ ಬೆಂಕಿ ಬಿದ್ದು ಮರಗಿಡ, ತೋಟದ ಮನೆ ಬೆಂಕಿಗೆ ಆಹುತಿಯಾಗಿದೆ. ಜಮೀನಿನಲ್ಲಿ ಕಟ್ಟಿದ್ದ ಜೋಡಿ ಹಸುಗಳಲ್ಲಿ ಒಂದು ಹಸು ಕಾಣೆಯಾಗಿದ್ದು, ಮತ್ತೊಂದು ಹಸುವಿಗೆ ಸುಟ್ಟು ಗಾಯಗಳಾಗಿವೆ.</p>.<p>‘ಹಲವು ವರ್ಷಗಳಿಂದ ಚಂದ್ರನಾಯ್ಕ, ಕಮಾರನಾಯ್ಕ, ಪಾಪಣ್ಣಿನಾಯ್ಕ ನಡುವೆ ಜಮೀನು ವಿವಾದ ನಡೆಯುತ್ತಿತ್ತು, ಶನಿವಾರ ವಿಚಾರಣೆ ಇದ್ದುದರಿಂದ ಕೋರ್ಟ್ಗೆ ಹೋಗಿದ್ದೆವು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿದ್ದಾರೆ’ ಎಂದು ನಾಗರಾಜು ಕೋಡಿಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಚಾಮುಂಡಿಪುರದಲ್ಲಿ ಜಮೀನಿಗೆ ಬೆಂಕಿ ತಗುಲಿ ಮರಗಿಡಗಳು ಸುಟ್ಟು ನಾಶವಾಗಿವೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿದ್ದಾರೆ ಎಂದು ದೂರಿ ಜಮೀನಿನ ಮಾಲೀಕ ನಾಗರಾಜು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ನಾಗರಾಜು ಅವರು ಶನಿವಾರ ನಗರದ ನ್ಯಾಯಾಲಯಕ್ಕೆ ಹೋಗಿ ಸಂಜೆ ವಾಪಸ್ ಬರುವಾಗ ಜಮೀನಿಗೆ ಬೆಂಕಿ ಬಿದ್ದು ಮರಗಿಡ, ತೋಟದ ಮನೆ ಬೆಂಕಿಗೆ ಆಹುತಿಯಾಗಿದೆ. ಜಮೀನಿನಲ್ಲಿ ಕಟ್ಟಿದ್ದ ಜೋಡಿ ಹಸುಗಳಲ್ಲಿ ಒಂದು ಹಸು ಕಾಣೆಯಾಗಿದ್ದು, ಮತ್ತೊಂದು ಹಸುವಿಗೆ ಸುಟ್ಟು ಗಾಯಗಳಾಗಿವೆ.</p>.<p>‘ಹಲವು ವರ್ಷಗಳಿಂದ ಚಂದ್ರನಾಯ್ಕ, ಕಮಾರನಾಯ್ಕ, ಪಾಪಣ್ಣಿನಾಯ್ಕ ನಡುವೆ ಜಮೀನು ವಿವಾದ ನಡೆಯುತ್ತಿತ್ತು, ಶನಿವಾರ ವಿಚಾರಣೆ ಇದ್ದುದರಿಂದ ಕೋರ್ಟ್ಗೆ ಹೋಗಿದ್ದೆವು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿದ್ದಾರೆ’ ಎಂದು ನಾಗರಾಜು ಕೋಡಿಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>