<p><strong>ಕನಕಪುರ</strong>: ಗ್ರಾಮಕ್ಕೆ ನುಗ್ಗಿ ಸಾಕು ಪ್ರಾಣಿಗಳನ್ನು ಹೊತ್ತೊಯ್ದು ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನ್ನು ಕಚ್ಚುವನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸೆರೆ ಹಿಡಿಯಲಾಗಿದೆ.</p>.<p>ತಾಲ್ಲೂಕಿನ ಸಾತನೂರು ಹೋಬಳಿ ಕಚ್ಚುವನಹಳ್ಳಿಯಲ್ಲಿ ಬೋನ್ ಇಟ್ಟು ಕಾರ್ಯಾಚರಣೆ ನಡೆಸಿ ಸುಮಾರು 3 ವರ್ಷದ ಗಂಡು ಚಿರತೆಯನ್ನು ಸೆರೆ ಹಿಡಿಯಲಾಗಿದೆ.</p>.<p>ಚಿರತೆಯು ಕಚ್ಚುವನಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಹುಟ್ಟಿಸಿತ್ತು. ಶನಿವಾರ ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ಹೊತ್ತೈದಿತ್ತು. ಹಾಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಕಚ್ಚುವನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆಯವರು ಕಚ್ಚುವನಹಳ್ಳಿಯ ಮಾವಿನ ತೋಟದಲ್ಲಿ ಬೋನ್ ಇಟ್ಟಿದ್ದರು.</p>.<p>ಚಿರತೆ ಬೋನಿನ ಕಡೆ ಬರದೆ ಸೋಮವಾರ ರಾತ್ರಿ ಗ್ರಾಮಕ್ಕೆ ನುಗ್ಗಿ ಮೇಕೆಯನ್ನು ಕೊಂದು ಅಲ್ಲೇ ಬಿಟ್ಟು ಹೋಗಿತ್ತು. ಅದೇ ಮೇಕೆಯನ್ನು ಬೋನಿನಲ್ಲಿ ಇಟ್ಟಿದ್ದರಿಂದ ಮಂಗಳವಾರ ಬೆಳಗ್ಗೆ ಮೇಕೆ ತಿನ್ನಲು ಬಂದು ಚಿರತೆ ಸೆರೆಯಾಗಿದೆ.</p>.<p>ಅರಣ್ಯ ಇಲಾಖೆಯ ಸಾತನೂರು ಆರ್ಎಫ್ಒ ಬಿ.ಆರ್.ಜಗದೀಶ್ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಶು ಇಲಾಖೆ ವೈದ್ಯಾಧಿಕಾರಿ ಡಾ.ಗಿರೀಶ್ ಅವರಿಂದ ಚಿರತೆಯ ತಪಾಸಣೆ ನಡೆಸಿ ವನ್ಯಜೀವಿಧಾಮಕ್ಕೆ ಮಂಗಳವಾರ ಸಂಜೆ ಬಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಗ್ರಾಮಕ್ಕೆ ನುಗ್ಗಿ ಸಾಕು ಪ್ರಾಣಿಗಳನ್ನು ಹೊತ್ತೊಯ್ದು ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನ್ನು ಕಚ್ಚುವನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸೆರೆ ಹಿಡಿಯಲಾಗಿದೆ.</p>.<p>ತಾಲ್ಲೂಕಿನ ಸಾತನೂರು ಹೋಬಳಿ ಕಚ್ಚುವನಹಳ್ಳಿಯಲ್ಲಿ ಬೋನ್ ಇಟ್ಟು ಕಾರ್ಯಾಚರಣೆ ನಡೆಸಿ ಸುಮಾರು 3 ವರ್ಷದ ಗಂಡು ಚಿರತೆಯನ್ನು ಸೆರೆ ಹಿಡಿಯಲಾಗಿದೆ.</p>.<p>ಚಿರತೆಯು ಕಚ್ಚುವನಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಹುಟ್ಟಿಸಿತ್ತು. ಶನಿವಾರ ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ಹೊತ್ತೈದಿತ್ತು. ಹಾಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಕಚ್ಚುವನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆಯವರು ಕಚ್ಚುವನಹಳ್ಳಿಯ ಮಾವಿನ ತೋಟದಲ್ಲಿ ಬೋನ್ ಇಟ್ಟಿದ್ದರು.</p>.<p>ಚಿರತೆ ಬೋನಿನ ಕಡೆ ಬರದೆ ಸೋಮವಾರ ರಾತ್ರಿ ಗ್ರಾಮಕ್ಕೆ ನುಗ್ಗಿ ಮೇಕೆಯನ್ನು ಕೊಂದು ಅಲ್ಲೇ ಬಿಟ್ಟು ಹೋಗಿತ್ತು. ಅದೇ ಮೇಕೆಯನ್ನು ಬೋನಿನಲ್ಲಿ ಇಟ್ಟಿದ್ದರಿಂದ ಮಂಗಳವಾರ ಬೆಳಗ್ಗೆ ಮೇಕೆ ತಿನ್ನಲು ಬಂದು ಚಿರತೆ ಸೆರೆಯಾಗಿದೆ.</p>.<p>ಅರಣ್ಯ ಇಲಾಖೆಯ ಸಾತನೂರು ಆರ್ಎಫ್ಒ ಬಿ.ಆರ್.ಜಗದೀಶ್ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಶು ಇಲಾಖೆ ವೈದ್ಯಾಧಿಕಾರಿ ಡಾ.ಗಿರೀಶ್ ಅವರಿಂದ ಚಿರತೆಯ ತಪಾಸಣೆ ನಡೆಸಿ ವನ್ಯಜೀವಿಧಾಮಕ್ಕೆ ಮಂಗಳವಾರ ಸಂಜೆ ಬಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>